ರಾಜ್ಯ

ಹಿಂದೂ ಅನ್ನೋದು ಅವಮಾನಕರ ಶಬ್ಧ: ಪ್ರೊ.ಕೆ.ಎಸ್.ಭಗವಾನ್‌ ವಿವಾದಾತ್ಮಕ ಹೇಳಿಕೆ

ರಾಯಚೂರು: ಹಿಂದೂ ಅನ್ನೋದು ಅವಮಾನಕರ ಶಬ್ಧ. ಯಾರು ಹೀನನಾಗಿದ್ದಾನೋ, ಯಾರು ದೂಷಣೆಗೆ ಒಳಗಾಗಿದ್ದಾನೋ ಅವನೇ ಹಿಂದೂ ಎಂದು ಚಿಂತಕ ಪ್ರೊ.ಕೆ.ಎಸ್.ಭಗವಾನ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪದೇ ಪದೇ ಹಿಂದುಗಳ ವಿರುದ್ಧ ಮಾತನಾಡಿ ಆಕ್ರೋಶಕ್ಕೆ ಗುರಿಯಾಗುತ್ತಿರುವ ಪ್ರೊ.ಕೆ.ಎಸ್.ಭಗವಾನ್‌ ಅವರು, ರಾಯಚೂರಿನ ದೇವದುರ್ಗದ ಕನಕಗುರುಪೀಠ ತಿಂಥಣಿ ಬ್ರಿಡ್ಜ್‌ನಲ್ಲಿ ನಡೆಯುತ್ತಿರುವ ಹಾಲುಮತ ಉತ್ಸವಕ್ಕೆ ಆಗಮಿಸಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.

ಹಿಂದು ಪದದ ಬಗ್ಗೆ ಮಾತನಾಡಿದ ಅವರು, ಹಿಂದೂ ಶಬ್ಧ ಬಂದಿದ್ದು 1030ನೇ ಇಸವಿಯಲ್ಲಿ. ಪರ್ಷಿಯನ್‌ ಲೇಖಕ ಆಲ್ಬರೋನಿ ಭಾರತದ ಬಗ್ಗೆ ಬರೆಯುತ್ತಾ ಸಿಂದೂ ನದಿಯನ್ನು ಹಿಂದೂ ಎಂದು ಕರೆದರು.

ಮುಂದೆ ಅಕ್ಬರ್‌ನ ಕಾಲದಲ್ಲಿ ಈ ದೇಶಕ್ಕೆ ಹಿಂದೂಸ್ತಾನ ಎಂದು ಹೆಸರು ಬಂತು. ಹೀಗಾಗಿ ರಾಮಾಯಣ, ಮಹಾಭಾರತ, ಪುರಾಣ, ವೇದ ಗ್ರಂಥಗಳಲ್ಲಿ ಹಿಂದೂ ಎನ್ನುವ ಹೆಸರಿಲ್ಲ ಎಂದರು.

ಕಾಶ್ಮೀರದ ಶೈವ ಗ್ರಂಥಗಳಲ್ಲಿ ಹಿಂದೂ ಪದಕ್ಕೆ ಯಾರೂ ಹೀನನಾಗಿದ್ದಾರೋ, ಯಾರು ದೂಷಣೆಗೆ ಒಳಗಾಗಿದ್ದಾರೋ ಅವನು ಹಿಂದೂ ಅಂತ ಇದೆ. ಹಾಗಾಗಿ ಹಿಂದೂ ಎನ್ನುವ ಶಬ್ಧ ಸಹ ಮನುಸ್ಮೃತಿ ಪ್ರಕಾರ ಅಪಮಾನಕ್ಕೆ ಒಳಗಾಗಿದೆ.

ಒಂದೊಂದು ಮಠ ಒಂದೊಂದು ಸಮುದಾಯಕ್ಕೆ ಸೀಮಿತವಾಗಿದೆ. ಇದರಿಂದ ಜನರ ಮನಸ್ಸು ಬಹಳ ಸಂಕುಚಿತವಾಗುತ್ತಿದೆ. ಎಲ್ಲರೂ ಸಮಾನರು ಎನ್ನುವ ಭಾವನೆಗೆ ಅಡ್ಡಿ ಬರುತ್ತಿದೆ ಎಂದು ಹಿಂದು ಎಂಬ ಪದದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಹಿಂದುಗಳ ಆಕ್ರೋಶಕ್ಕೆ ಕಾರಣರಾಗಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

3 hours ago

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

19 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

20 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

21 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

23 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

1 day ago