ಚಿಕ್ಕೋಡಿ: ಹಿಂದೂ ದೇವಾಲಯಗಳನ್ನು ನಾಶ ಮಾಡಿ ಮಸೀದಿ ನಿರ್ಮಿಸಿರುವುದನ್ನು ತೆಗೆದುಕೊಳ್ಳಿ ಇಲ್ಲವಾದರೇ ಹಿಂದೂ ಸಮಾಜ ಮಸೀದಿಗಳನ್ನು ಒಡೆದುಹಾಕುತ್ತದೆ ಎಂದು ಕೆ.ಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
ನಗರದಲ್ಲಿಂದು ಮೋದಿ ಗೆಲ್ಲಿಸಿ-ಭಾರತ ಉಳಿಸಿ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಕೋರ್ಟ್ ಆದೇಶವನ್ನೇ ತಿರಸ್ಕರಿಸಿ ಹಿಜಾಬ್ ನಿಷೇಧ ಬಗ್ಗೆ ಮಾತನಾಡುತ್ತಾರೆ. ಅವರು ಹಿಜಾಬ್ ಧರಿಸಿ ಶಾಲಾ-ಕಾಲೇಜುಗಳಿಗೆ ಬಂದರೆ, ನಮ್ಮ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬರಲಿದ್ದಾರೆ ಎಂದು ಕಿಡಿಕಾರಿದ್ದಾರೆ.
ಸಚಿವ ಪ್ರಯಾಂಕ್ ಖರ್ಗೆ ಪ್ರಧಾನಿ ಮೋದಿ ಬಗ್ಗೆ ಮಾತನಾಡಿರುವ ಕುರಿತು, ಪ್ರಧಾನಿ ಮೋದಿ ಸೂರ್ಯ ಇದ್ದಾಗೆ, ಸೂರ್ಯನಿಗೆ ಉಗಿದರೇ ಅದು ಅವರಿಗೆ ಮರಳಿ ಬರುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಜನವರಿ ೨೨ ರಂದು ರಾಮ ಮಂದಿರ ಉದ್ಘಾಟನೆ ದಿನದಂದು ಸ್ವಾತಂತ್ರ್ಯ ಹೋರಾಟಗಾರರ ಆತ್ಮಕ್ಕೆ ಶಾಂತಿ ಸಿಗಲಿದೆ. ಕಾಂಗ್ರೆಸ್ ನಾಯಕರು ಹಿಂದುಗಳ ನಡುವೆ ಬೆಂಕಿ ಹಚ್ಚಿದವರು. ಆದರೆ ಪ್ರಧಾನಿ ಮೋದಿ ಭಾರತೀಯ ಸಂಸ್ಕೃತಿಯನ್ನು ವಿಶ್ವಕ್ಕೆ ಸಾರಿದರು. ಕಾಂಗ್ರೆಸ್ ಅಧಿಕಾರದ ಆಸೆಯಿಂದ ದೇಶ ತುಂಡು-ತುಂಡಾಯಿತು. ದೇಶ ಲೂಟಿ ಮಾಡಿದವರಿಂದ ನಮ್ಮ ಸಂಸ್ಕೃತಿ ನಾಶ ಮಾಡಲು ಆಗಲಿಲ್ಲ. ಈಗ ರಾಮ ಮಂದಿರ ಉದ್ಘಾಟನೆಗೆ ಪಾಸ್ಗಳನ್ನು ಶೋಆಫ್ ಮಾಡಲು ಕೇಳುತ್ತಿದ್ದಾರೆ ಎಂದು ಹರಿಹಾಯ್ದರು.
ಸಿಎಂ ಸಿದ್ದರಾಮಯ್ಯ ೧ ಸಾವಿರ ಕೋಟಿಯನ್ನು ಮುಸ್ಲೀಂರಿಗೆ ಅವರ ಅಪ್ಪನ ಮನೆಯ ದುಡ್ಡಿಂದ ಕೊಡ್ತಾರಾ?, ಹಮ್ ದೋ ಹಮಾರೆ ದೋ ಎಂದು ಮೋದಿ ಕಾನೂನು ತಂದಿದ್ದಾರೆ. ಆದರೆ ಮುಸ್ಲೀಮರು ಹಮ್ ಪಾಂಚ್ ಹಮಾರಾ ಪಚ್ಚಿಸ್ ಎನ್ನುತ್ತಾರೆ. ಇವರ ಆಟ ಮೋದಿ ಕಾಲಾವಧಿಯಲ್ಲಿ ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.
ಅಯೋಧ್ಯೆ ರಾಮ ಮಂದಿರ ನಂತರ ನ್ಯಾಯಾಲಯದ ಸೂಚನೆ ಮೇರೆಗೆ ಮಥುರಾ, ಕಾಶಿ ದೇವಾಲಯಗಳ ಸರ್ವೇ ಕಾರ್ಯ ನಡೆಯುತ್ತಿದೆ. ಶೀಘ್ರ ಅಲ್ಲಿ ಕಾಶಿ ವಿಶ್ವನಾಥ, ಮಥುರಾದಲ್ಲಿ ಕೃಷ್ಣ ದೇವಾಲಯಗಳನ್ನು ನಿರ್ಮಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…