ರಾಜ್ಯ

ಹಿಂದೂ ಸಮಾಜ ಮಸೀದಿಗಳನ್ನು ಒಡೆದು ಹಾಕುತ್ತದೆ: ಈಶ್ವರಪ್ಪ ವಿವಾದಾತ್ಮಕ ಹೇಳಿಕೆ!

ಚಿಕ್ಕೋಡಿ: ಹಿಂದೂ ದೇವಾಲಯಗಳನ್ನು ನಾಶ ಮಾಡಿ ಮಸೀದಿ ನಿರ್ಮಿಸಿರುವುದನ್ನು ತೆಗೆದುಕೊಳ್ಳಿ ಇಲ್ಲವಾದರೇ ಹಿಂದೂ ಸಮಾಜ ಮಸೀದಿಗಳನ್ನು ಒಡೆದುಹಾಕುತ್ತದೆ ಎಂದು ಕೆ.ಎಸ್‌ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

ನಗರದಲ್ಲಿಂದು ಮೋದಿ ಗೆಲ್ಲಿಸಿ-ಭಾರತ ಉಳಿಸಿ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಕೋರ್ಟ್‌ ಆದೇಶವನ್ನೇ ತಿರಸ್ಕರಿಸಿ ಹಿಜಾಬ್‌ ನಿಷೇಧ ಬಗ್ಗೆ ಮಾತನಾಡುತ್ತಾರೆ. ಅವರು ಹಿಜಾಬ್‌ ಧರಿಸಿ ಶಾಲಾ-ಕಾಲೇಜುಗಳಿಗೆ ಬಂದರೆ, ನಮ್ಮ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬರಲಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸಚಿವ ಪ್ರಯಾಂಕ್‌ ಖರ್ಗೆ ಪ್ರಧಾನಿ ಮೋದಿ ಬಗ್ಗೆ ಮಾತನಾಡಿರುವ ಕುರಿತು, ಪ್ರಧಾನಿ ಮೋದಿ ಸೂರ್ಯ ಇದ್ದಾಗೆ, ಸೂರ್ಯನಿಗೆ ಉಗಿದರೇ ಅದು ಅವರಿಗೆ ಮರಳಿ ಬರುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಜನವರಿ ೨೨ ರಂದು ರಾಮ ಮಂದಿರ ಉದ್ಘಾಟನೆ ದಿನದಂದು ಸ್ವಾತಂತ್ರ್ಯ ಹೋರಾಟಗಾರರ ಆತ್ಮಕ್ಕೆ ಶಾಂತಿ ಸಿಗಲಿದೆ. ಕಾಂಗ್ರೆಸ್‌ ನಾಯಕರು ಹಿಂದುಗಳ ನಡುವೆ ಬೆಂಕಿ ಹಚ್ಚಿದವರು. ಆದರೆ ಪ್ರಧಾನಿ ಮೋದಿ ಭಾರತೀಯ ಸಂಸ್ಕೃತಿಯನ್ನು ವಿಶ್ವಕ್ಕೆ ಸಾರಿದರು. ಕಾಂಗ್ರೆಸ್‌ ಅಧಿಕಾರದ ಆಸೆಯಿಂದ ದೇಶ ತುಂಡು-ತುಂಡಾಯಿತು. ದೇಶ ಲೂಟಿ ಮಾಡಿದವರಿಂದ ನಮ್ಮ ಸಂಸ್ಕೃತಿ ನಾಶ ಮಾಡಲು ಆಗಲಿಲ್ಲ. ಈಗ ರಾಮ ಮಂದಿರ ಉದ್ಘಾಟನೆಗೆ ಪಾಸ್‌ಗಳನ್ನು ಶೋಆಫ್‌ ಮಾಡಲು ಕೇಳುತ್ತಿದ್ದಾರೆ ಎಂದು ಹರಿಹಾಯ್ದರು.

ಸಿಎಂ ಸಿದ್ದರಾಮಯ್ಯ ೧ ಸಾವಿರ ಕೋಟಿಯನ್ನು ಮುಸ್ಲೀಂರಿಗೆ ಅವರ ಅಪ್ಪನ ಮನೆಯ ದುಡ್ಡಿಂದ ಕೊಡ್ತಾರಾ?, ಹಮ್ ದೋ ಹಮಾರೆ ದೋ ಎಂದು ಮೋದಿ ಕಾನೂನು ತಂದಿದ್ದಾರೆ. ಆದರೆ ಮುಸ್ಲೀಮರು ಹಮ್ ಪಾಂಚ್ ಹಮಾರಾ ಪಚ್ಚಿಸ್ ಎನ್ನುತ್ತಾರೆ. ಇವರ ಆಟ ಮೋದಿ ಕಾಲಾವಧಿಯಲ್ಲಿ ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.

ಅಯೋಧ್ಯೆ ರಾಮ ಮಂದಿರ ನಂತರ ನ್ಯಾಯಾಲಯದ ಸೂಚನೆ ಮೇರೆಗೆ ಮಥುರಾ, ಕಾಶಿ ದೇವಾಲಯಗಳ ಸರ್ವೇ ಕಾರ್ಯ ನಡೆಯುತ್ತಿದೆ. ಶೀಘ್ರ ಅಲ್ಲಿ ಕಾಶಿ ವಿಶ್ವನಾಥ, ಮಥುರಾದಲ್ಲಿ ಕೃಷ್ಣ ದೇವಾಲಯಗಳನ್ನು ನಿರ್ಮಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

andolanait

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

4 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

5 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

5 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

6 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

6 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

7 hours ago