ರಾಜ್ಯ

ಹಿಂದೂ ಸಮಾಜ ಮಸೀದಿಗಳನ್ನು ಒಡೆದು ಹಾಕುತ್ತದೆ: ಈಶ್ವರಪ್ಪ ವಿವಾದಾತ್ಮಕ ಹೇಳಿಕೆ!

ಚಿಕ್ಕೋಡಿ: ಹಿಂದೂ ದೇವಾಲಯಗಳನ್ನು ನಾಶ ಮಾಡಿ ಮಸೀದಿ ನಿರ್ಮಿಸಿರುವುದನ್ನು ತೆಗೆದುಕೊಳ್ಳಿ ಇಲ್ಲವಾದರೇ ಹಿಂದೂ ಸಮಾಜ ಮಸೀದಿಗಳನ್ನು ಒಡೆದುಹಾಕುತ್ತದೆ ಎಂದು ಕೆ.ಎಸ್‌ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

ನಗರದಲ್ಲಿಂದು ಮೋದಿ ಗೆಲ್ಲಿಸಿ-ಭಾರತ ಉಳಿಸಿ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಕೋರ್ಟ್‌ ಆದೇಶವನ್ನೇ ತಿರಸ್ಕರಿಸಿ ಹಿಜಾಬ್‌ ನಿಷೇಧ ಬಗ್ಗೆ ಮಾತನಾಡುತ್ತಾರೆ. ಅವರು ಹಿಜಾಬ್‌ ಧರಿಸಿ ಶಾಲಾ-ಕಾಲೇಜುಗಳಿಗೆ ಬಂದರೆ, ನಮ್ಮ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬರಲಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸಚಿವ ಪ್ರಯಾಂಕ್‌ ಖರ್ಗೆ ಪ್ರಧಾನಿ ಮೋದಿ ಬಗ್ಗೆ ಮಾತನಾಡಿರುವ ಕುರಿತು, ಪ್ರಧಾನಿ ಮೋದಿ ಸೂರ್ಯ ಇದ್ದಾಗೆ, ಸೂರ್ಯನಿಗೆ ಉಗಿದರೇ ಅದು ಅವರಿಗೆ ಮರಳಿ ಬರುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಜನವರಿ ೨೨ ರಂದು ರಾಮ ಮಂದಿರ ಉದ್ಘಾಟನೆ ದಿನದಂದು ಸ್ವಾತಂತ್ರ್ಯ ಹೋರಾಟಗಾರರ ಆತ್ಮಕ್ಕೆ ಶಾಂತಿ ಸಿಗಲಿದೆ. ಕಾಂಗ್ರೆಸ್‌ ನಾಯಕರು ಹಿಂದುಗಳ ನಡುವೆ ಬೆಂಕಿ ಹಚ್ಚಿದವರು. ಆದರೆ ಪ್ರಧಾನಿ ಮೋದಿ ಭಾರತೀಯ ಸಂಸ್ಕೃತಿಯನ್ನು ವಿಶ್ವಕ್ಕೆ ಸಾರಿದರು. ಕಾಂಗ್ರೆಸ್‌ ಅಧಿಕಾರದ ಆಸೆಯಿಂದ ದೇಶ ತುಂಡು-ತುಂಡಾಯಿತು. ದೇಶ ಲೂಟಿ ಮಾಡಿದವರಿಂದ ನಮ್ಮ ಸಂಸ್ಕೃತಿ ನಾಶ ಮಾಡಲು ಆಗಲಿಲ್ಲ. ಈಗ ರಾಮ ಮಂದಿರ ಉದ್ಘಾಟನೆಗೆ ಪಾಸ್‌ಗಳನ್ನು ಶೋಆಫ್‌ ಮಾಡಲು ಕೇಳುತ್ತಿದ್ದಾರೆ ಎಂದು ಹರಿಹಾಯ್ದರು.

ಸಿಎಂ ಸಿದ್ದರಾಮಯ್ಯ ೧ ಸಾವಿರ ಕೋಟಿಯನ್ನು ಮುಸ್ಲೀಂರಿಗೆ ಅವರ ಅಪ್ಪನ ಮನೆಯ ದುಡ್ಡಿಂದ ಕೊಡ್ತಾರಾ?, ಹಮ್ ದೋ ಹಮಾರೆ ದೋ ಎಂದು ಮೋದಿ ಕಾನೂನು ತಂದಿದ್ದಾರೆ. ಆದರೆ ಮುಸ್ಲೀಮರು ಹಮ್ ಪಾಂಚ್ ಹಮಾರಾ ಪಚ್ಚಿಸ್ ಎನ್ನುತ್ತಾರೆ. ಇವರ ಆಟ ಮೋದಿ ಕಾಲಾವಧಿಯಲ್ಲಿ ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.

ಅಯೋಧ್ಯೆ ರಾಮ ಮಂದಿರ ನಂತರ ನ್ಯಾಯಾಲಯದ ಸೂಚನೆ ಮೇರೆಗೆ ಮಥುರಾ, ಕಾಶಿ ದೇವಾಲಯಗಳ ಸರ್ವೇ ಕಾರ್ಯ ನಡೆಯುತ್ತಿದೆ. ಶೀಘ್ರ ಅಲ್ಲಿ ಕಾಶಿ ವಿಶ್ವನಾಥ, ಮಥುರಾದಲ್ಲಿ ಕೃಷ್ಣ ದೇವಾಲಯಗಳನ್ನು ನಿರ್ಮಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

andolanait

Recent Posts

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

1 hour ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

6 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

6 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

8 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

8 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

12 hours ago