ರಾಜ್ಯ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು ಅನುಮತಿಸುವ ಸುಳಿವವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನ್ಯಾಯಮೂರ್ತಿ ಮೈಕಲ್ ಡಿ’ ಕುನ್ಹಾ ಅವರ ಆಯೋಗದ ವರದಿ ಆಧರಿಸಿ ಏನೆಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದನ್ನು ಪರಿಶೀಲಿಸಿ ಕ್ರಿಕೆಟ್ ಪಂದ್ಯಾವಳಿ ನಡೆಸಲು ಅನುಮತಿ ನೀಡಲಾಗುವುದು ಎಂದರು.

ನ್ಯಾಯಮೂರ್ತಿಗಳ ವರದಿ ಆಧರಿಸಿ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿಯಲ್ಲಿ ಕೈಗೊಳ್ಳಬಹುದಾದ ಕ್ರಮಗಳು ಎಂದು ಮೂರು ಭಾಗ ಮಾಡಲಾಗಿದೆ. ಮೊದಲ ಹಂತದಲ್ಲಿ ಕಿರು ಅವಧಿಯ ಕ್ರಮ ಕೈಗೊಳ್ಳಬೇಕಿತ್ತು. ಅದನ್ನು ಪರಿಶೀಲಿಸಲು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಸಮಿತಿ ಈಗಾಗಲೇ ಎರಡು ಬಾರಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲಿಸಿದೆ. ದೀರ್ಘಾವಽಯ ಯೋಜನೆಗಳನ್ನೂ ಈಗಲೇ ಈಡೇರಿಸಿ ಎಂದರೆ ಅದು ಕಷ್ಟ ಸಾಧ್ಯ. ಅಲ್ಪಕಾಲಿಕ ಕ್ರಮಗಳನ್ನು ಕೈಗೊಂಡಿದ್ದರೆ ಐಪಿಎಲ್ ಪಂದ್ಯಾವಳಿಗಳಿಗೆ ಅವಕಾಶ ನೀಡುವುದಾಗಿ ತಿಳಿಸಿದರು.

ಬಂದೂಕು ಹಿಡಿದು ನೃತ್ಯ ಮಾಡಿರುವ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ. ಯಾವುದೇ ಪಕ್ಷದವರಾಗಿದ್ದರೂ ಅದು ನಂತರದ ವಿಷಯ. ಕಾನೂನು ಬಾಹಿರ ಕೃತ್ಯ ಮಾಡಿದ್ದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ. ಸಚಿವ ಪ್ರಿಯಾಂಕ್ ಖರ್ಗೆ, ಅಫ್ಜಲ್‌ಪುರ ಕ್ಷೇತ್ರದ ಶಾಸಕರ ಆಪ್ತರು ಎಂಬ ಕಾರಣಕ್ಕೆ ವಿನಾಯಿತಿ ನೀಡುವುದಿಲ್ಲ. ತಮ್ಮ ಆಪ್ತರಿಗೆ ಯಾವ ಸಚಿವರು, ಶಾಸಕರೂ ಕಾನೂನು ಉಲ್ಲಂಘನೆ ಮಾಡಿ ಎಂದು ಹೇಳಿರುವುದಿಲ್ಲ ಎಂದರು.

ಬೈರತಿ ಬಸವರಾಜು ಬಂಧನಕ್ಕೆ ಕ್ರಮ
ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಬೈರತಿ ಬಸವರಾಜು ಅವರ ಅರ್ಜಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನಿ ನಿರಾಕರಿಸಿ ಎರಡು ದಿನಗಳ ಹಿಂದೆಯಷ್ಟೆ ಆದೇಶ ನೀಡಿದೆ. ಇನ್ನೂ ಮುಂದೆ ಅವರನ್ನು ಬಂಧಿಸಲು ಕಾರ್ಯಾಚರಣೆ ನಡೆಸಲಾಗುತ್ತದೆ. ಅವರಾಗಿಯೇ ಬಂದು ಶರಣಾದರೆ ಒಳ್ಳೆಯದು ಇಲ್ಲವಾದರೆ, ಪೊಲೀಸರು ಬಂಧಿಸಿ ಕರೆ ತರುತ್ತಾರೆ ಎಂದು ಹೇಳಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿವಾಜಿ ಗಣೇಶನ್ ಅವರ ವಾರದ ಅಂಕಣ : ಬಂಗಾಳ, ತಮಿಳುನಾಡಿನ ರಾಜಕಾರಣದಲ್ಲಿ ಬಿರುಗಾಳಿ

ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…

2 hours ago

ಭಾನುವಾರದ ಹಾಡುಪಾಡು | ಆಡುಮಾತಿಗೆ ಹತ್ತಿರವಿರುವ ಕಾವ್ಯಾನುವಾದ

ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…

2 hours ago

ಭಾನುವಾರದ ಹಾಡುಪಾಡು | ವಿಯಟ್ಟಾಮಿನಲ್ಲೂ ಹುಡುಗಿಯರೇ ಸ್ಟ್ರಾಂಗೂ ಗುರೂ

ಬಲಿಷ್ಟ ಮಹಿಳೆ, ಸಮೃದ್ದ ಕುಟುಂಬ, ಬಲಿಷ್ಠ ರಾಷ್ಟ್ರ ಎಂಬ ಮಾತು ವಿಯಾಟ್ಟಾಮಿನಲ್ಲಿ ಅಕ್ಷರಶಃ ಸತ್ಯ. ಇತಿಹಾಸದಿಂದ ಇಂದಿನವರೆಗೂ ಅಲ್ಲಿನ ಮಹಿಳೆಯರು…

2 hours ago

ಭಾನುವಾರದ ಹಾಡುಪಾಡು | “ಇಲ್ಲ ಕಣ್‌ ಪುಟ್ರಂಗಾ, ಡಿಕೆ ಏನಾರೂ ಮಾಡದ್ರೂ ಮಾಡಬೋದು ಅನಿಸ್ತಾದೆ”

• ಕುಸುಮ ಆಯರಹಳ್ಳಿ ವೀಕೆಂಡಿನಲ್ಲಿ ಊರಿಗೆ ಬಂದು ಅವನನ್ನು ಮಾತಾಡಿಸಿಕೊಂಡು ಹೋಗುವ ಪ್ರೊಫೆಸರ್ ಧರ್ಮರಾಜ್‌ಗೆ ಊರಲ್ಲಿ ಜನವೇ ಕಾಣದಿದ್ದುದು ಅಚ್ಚರಿಯಾಯ್ತು.…

2 hours ago

ಎಲ್‌ಪಿಜಿ ಸಿಲಿಂಡರ್‌ ದರ ಮತ್ತೆ ಏರಿಕೆ ; ಪರಿಷ್ಕೃತ ದರ ಇಂದಿನಿಂದಲೇ ಜಾರಿ

ಹೊಸದಿಲ್ಲಿ :  ಮಧ್ಯಪ್ರಾಚ್ಯ ಬಿಕ್ಕಟ್ಟು ಆರಂಭವಾದ ಬಳಿಕ ಕಳೆದ 3 ತಿಂಗಳ ಅವಧಿಯಲ್ಲಿ 2 ನೇ ಬಾರಿಗೆ ಗೃಹಬಳಕೆ ಎಲ್…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 7 ಭಾನುವಾರ

5 hours ago