ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ.
ಇಂದು ಸಂಜೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ಧ್ವಜಾರೋಹಣ ಮೂಲಕ ಉತ್ಸವಕ್ಕೆ ಅಧಿಕೃತ ಚಾಲನೆ ಸಿಗಲಿದೆ.
ಒಟ್ಟು 11 ದಿನಗಳ ಕಾಲ ನಡೆಯುವ ಈ ಉತ್ಸವದಲ್ಲಿ ಮಾರ್ಚ್.30ರಂದು ಹಸಿ ಕರಗವಿದ್ದು, ಏಪ್ರಿಲ್.1ರಂದು ಕರಗ ಶಕ್ತ್ಯೋತ್ಸವ ನಡೆಯಲಿದೆ.
ಈ ದಿನವೇ ದ್ರೌಪದಿ ದೇವಿಯ ಹೂವಿನ ಕರಗವು ಸಂಚರಿಸಿ ಲಕ್ಷಾಂತರ ಭಕ್ತರಿಗೆ ದರ್ಶನ ನೀಡಲಿದೆ. ಈ ಬಾರಿಯು ಎ.ಜ್ಞಾನೇಂದ್ರ ಸ್ವಾಮಿ ಕರಗ ಹೊರಲಿದ್ದಾರೆ.





