ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಾಗಡಿ ತಾಲ್ಲೂಕಿನ ಗುಡೇಮಾರನಹಳ್ಳಿ ಬಳಿ ನಡೆದಿದೆ.
ರೇವಣ್ಣ ಪುತ್ರ ಶಶಾಂಕ್ ಫಾರ್ಚೂನರ್ ಕಾರು ಬೈಕಿಗೆ ಡಿಕ್ಕಿ ಹೊಡೆದು ಸವಾರ ರಾಜೇಶ್ ಸಾವನ್ನಪ್ಪಿದ್ದಾರೆ. ಮಾಗಡಿ ತಾಲ್ಲೂಕಿನ ಗುಡೇಮಾರನಹಳ್ಳಿ ಟೋಲ್ ನೂರು ಮೀಟರ್ ಬಳಿ ಕಾರು ಗುದ್ದಿದೆ.
ಇದನ್ನು ಓದಿ: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ
ಕಳೆದ ತಡರಾತ್ರಿ 10.30ರ ಸುಮಾರಿಗೆ ಅಪಘಾತ ಎಸಗಿದ ಬಳಿಕ ಶಶಾಂಕ್ ಕಾರಿನೊಂದಿಗೆ ಪರಾರಿಯಾಗಿದ್ದರು. ಈ ವಿಚಾರ ತಿಳಿದ ಸ್ಥಳೀಯರು 5 ಕಿ.ಮೀ ಹಿಂಬಾಲಿಸಿ ಕಾರನ್ನು ಅಡ್ಡಗಟ್ಟಿ ನಿಲ್ಲಿಸಿದ್ದಾರೆ.
ಈ ವೇಳೆ ಕಾರಿನಿಂದ ಇಳಿದ ಬಳಿಕ ಶಶಾಂಕ್ ನಾನು ಯಾರು ಗೊತ್ತಾ? ಎಚ್.ಎಂ.ರೇವಣ್ಣ ಪುತ್ರ ಎಂದು ಅವಾಜ್ ಹಾಕಿದ್ದಾರೆ. ನಂತರ ಕಾರನ್ನು ಬದಿಯಲ್ಲಿ ನಿಲ್ಲಿಸುತ್ತೇನೆ ಎಂದು ಹೇಳಿ ಶಶಾಂಕ್ ಪರಾರಿಯಾಗಿದ್ದಾರೆ.
ತಡರಾತ್ರಿ ಫಾರ್ಚೂನರ್ ಕಾರನ್ನು ಕುದೂರು ಪೊಲೀಸ್ ಠಾಣೆಗೆ ತರಲಾಗಿದೆ.
ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಿಎಂ ಬದಲಾವಣೆ…
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…
ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…