ರಾಜ್ಯ

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ ಘಟನೆ ಮಾಗಡಿ ತಾಲ್ಲೂಕಿನ ಗುಡೇಮಾರನಹಳ್ಳಿ ಬಳಿ ನಡೆದಿದೆ.

ರೇವಣ್ಣ ಪುತ್ರ ಶಶಾಂಕ್‌ ಫಾರ್ಚೂನರ್‌ ಕಾರು ಬೈಕಿಗೆ ಡಿಕ್ಕಿ ಹೊಡೆದು ಸವಾರ ರಾಜೇಶ್‌ ಸಾವನ್ನಪ್ಪಿದ್ದಾರೆ. ಮಾಗಡಿ ತಾಲ್ಲೂಕಿನ ಗುಡೇಮಾರನಹಳ್ಳಿ ಟೋಲ್‌ ನೂರು ಮೀಟರ್‌ ಬಳಿ ಕಾರು ಗುದ್ದಿದೆ.

ಇದನ್ನು ಓದಿ: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ

ಕಳೆದ ತಡರಾತ್ರಿ 10.30ರ ಸುಮಾರಿಗೆ ಅಪಘಾತ ಎಸಗಿದ ಬಳಿಕ ಶಶಾಂಕ್‌ ಕಾರಿನೊಂದಿಗೆ ಪರಾರಿಯಾಗಿದ್ದರು. ಈ ವಿಚಾರ ತಿಳಿದ ಸ್ಥಳೀಯರು 5 ಕಿ.ಮೀ ಹಿಂಬಾಲಿಸಿ ಕಾರನ್ನು ಅಡ್ಡಗಟ್ಟಿ ನಿಲ್ಲಿಸಿದ್ದಾರೆ.

ಈ ವೇಳೆ ಕಾರಿನಿಂದ ಇಳಿದ ಬಳಿಕ ಶಶಾಂಕ್‌ ನಾನು ಯಾರು ಗೊತ್ತಾ? ಎಚ್.ಎಂ.ರೇವಣ್ಣ ಪುತ್ರ ಎಂದು ಅವಾಜ್‌ ಹಾಕಿದ್ದಾರೆ. ನಂತರ ಕಾರನ್ನು ಬದಿಯಲ್ಲಿ ನಿಲ್ಲಿಸುತ್ತೇನೆ ಎಂದು ಹೇಳಿ ಶಶಾಂಕ್‌ ಪರಾರಿಯಾಗಿದ್ದಾರೆ.

ತಡರಾತ್ರಿ ಫಾರ್ಚೂನರ್‌ ಕಾರನ್ನು ಕುದೂರು ಪೊಲೀಸ್‌ ಠಾಣೆಗೆ ತರಲಾಗಿದೆ.

ಆಂದೋಲನ ಡೆಸ್ಕ್

Recent Posts

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

1 hour ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

10 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

10 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

10 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

10 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

10 hours ago