ರಾಜ್ಯ

ಬೆಂಗಳೂರಿನಲ್ಲಿ HMPV ವೈರಸ್‌ ಪತ್ತೆ: ಆರೋಗ್ಯ ಇಲಾಖೆಯ ಗೈಡ್‌ಲೈನ್ಸ್‌ ಬಿಡುಗಡೆ

ಬೆಂಗಳೂರು: ಇಲ್ಲಿನ 8 ತಿಂಗಳ ಪುಟ್ಟು ಮಗುವಿಗೆ ಎಚ್‌ಎಂಪಿವಿ ವೈರಸ್‌ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯೂ ಅಲರ್ಟ್‌ ಆಗಿದ್ದು, ಇಲಾಖೆ ವತಿಯಿಂದ ಹೊಸ ಗೈಡ್‌ಲೈನ್ಸ್‌ ಅನ್ನು ಬಿಡುಗಡೆ ಮಾಡಲಾಗಿದೆ.

ಈ ಚೀನಿ ವೈರಸ್‌ ಪತ್ತೆಯಾದ ಬಳಿಕ ಇಂದು ಆರೋಗ್ಯ ಸಚಿವ ದಿನೇಶ್‌ ಗುಂಡುರಾವ್‌ ಅವರು ಮಧ್ಯಾಹ್ನದ ವೇಳೆಗೆ ತುರ್ತು ಸಭೆ ಕರೆದಿದ್ದಾರೆ. ಅಲ್ಲದೇ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ವೈರಸ್‌ ಪತ್ತೆಯಾದ ಬಗ್ಗೆ ಎಲ್ಲಾ ಡಿಎಚ್‌ಓಗಳಿಂದ ಆರೋಗ್ಯ ಇಲಾಕೆ ಮಾಹಿತಿ ನೀಡುವಂತೆ ಸೂಚಿಸಿದೆ. ಜೊತೆಗೆ ಪ್ರತಿಯೊಂದು ಡೇಟಾವನ್ನು ಪತ್ತೆ ಹಚ್ಚಬೇಕು. ಒಂದು ವೇಳೆ ವೈರಸ್‌ ದೃಢಪಟ್ಟರೆ ಟ್ರಾವೆಲ್‌ ಹಿಸ್ಟರಿಯನ್ನು ಪತ್ತೆ ಹಚ್ಚಬೇಕು ಎಂದು ಆದೇಶಿದೆ.

ವೈರಸ್‌ ತಡೆಗಟ್ಟಲು ಏನು ಮಾಡಬೇಕು?

1.ಕೆಮ್ಮುವಾಗ ಅಥವಾ ಸೀನುವಾಗ, ಬಾಯಿ ಮತ್ತು ಮೂಗನ್ನು ಕರವಸ್ತ್ರ ಅಥವಾ ಟಿಶ್ಯೂ ಪೇಪರ್‌ನಿಂದ ಮುಚ್ಚಿಕೊಳ್ಳಬೇಕು.
2.ಕೈಗಳನ್ನು ಸಾಬೂನು ಮತ್ತು ನೀರು ಅಥವಾ ಆಲ್ಕೋಹಾಲ್ ಆಧಾರಿತ ಸ್ಯಾನಿಟೈಜರ್‌ನಿಂದ ಹೆಚ್ಚಾಗಿ ತೊಳೆಯಬೇಕು.
3.ಜನಸಂದಣಿ ಇರುವ ಸ್ಥಳಗಳನ್ನು ತಪ್ಪಿಸಬೇಕು.
4.ಜ್ವರ, ಕೆಮ್ಮು ಮತ್ತು ಸೀನುವಿಕೆ ಇದ್ದಲ್ಲಿ ಸಾರ್ವಜನಿಕ ಸ್ಥಳಗಳಿಂದ ದೂರವಿರಬೇಕು.
5.ಮನೆಯಲ್ಲಿಯೇ ಇರಬೇಕು ಹಾಗೂ ನೀವು ಅನಾರೋಗ್ಯದಿಂದ ಬಳಲುತ್ತಿದ್ದರೆ ಇತರರೊಂದಿಗೆ ಸಂಪರ್ಕವನ್ನು ಮಿತಿಗೊಳಿಸಬೇಕು.
6. ಸಾಕಷ್ಟು ನೀರು ಕುಡಿಯಿರಿ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸಬೇಕು.

ಏನು ಮಾಡಬಾರದು?

1. ಟಿಶ್ಯೂ ಪೇಪರ್ ಹಾಗೂ ಕೈ ಕರ್ಚೀಫ್ ಮರುಬಳಕೆ ಬಾರದು
2.ಅನಾರೋಗ್ಯದ ಜನರೊಂದಿಗೆ ನಿಕಟ ಸಂಪರ್ಕ, ಟವೆಲ್, ಲಿನಿನ್ ಇತ್ಯಾದಿಗಳನ್ನು ಹಂಚಿಕೊಳ್ಳಬಾರದು.
3.ಕಣ್ಣು, ಮೂಗು ಹಾಗೂ ಬಾಯಿಯನ್ನು ಆಗಾಗ್ಗೆ ಸ್ಪರ್ಶಿಸಬಾರದು.
4.ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು.
5.ವೈದ್ಯರನ್ನು ಸಂಪರ್ಕಿಸದೆ ಔಷಧಿ ಸೇವಿಸಬಾರದು.

 

ಅರ್ಚನ ಎಸ್‌ ಎಸ್

Recent Posts

ಮೈಸೂರಿನಲ್ಲಿ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ: ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸ್ಪಷ್ಟನೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎನ್‌ಸಿಬಿ ದಾಳಿ ವೇಳೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್‌ ಕಮಿಷನರ್‌ ಸೀಮಾ…

13 mins ago

ಮೈಸೂರು: ಕೆಮಿಕಲ್‌ ಘಟಕದ ಮೇಲೆ ದೆಹಲಿ ಪೊಲೀಸರ ದಾಳಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್‌ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್‌ಗಳನ್ನು…

46 mins ago

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

4 hours ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

4 hours ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

4 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

4 hours ago