ರಾಜ್ಯ

ಬೆಂಗಳೂರಿನಲ್ಲಿ HMPV ವೈರಸ್‌ ಪತ್ತೆ: ಆರೋಗ್ಯ ಇಲಾಖೆಯ ಗೈಡ್‌ಲೈನ್ಸ್‌ ಬಿಡುಗಡೆ

ಬೆಂಗಳೂರು: ಇಲ್ಲಿನ 8 ತಿಂಗಳ ಪುಟ್ಟು ಮಗುವಿಗೆ ಎಚ್‌ಎಂಪಿವಿ ವೈರಸ್‌ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯೂ ಅಲರ್ಟ್‌ ಆಗಿದ್ದು, ಇಲಾಖೆ ವತಿಯಿಂದ ಹೊಸ ಗೈಡ್‌ಲೈನ್ಸ್‌ ಅನ್ನು ಬಿಡುಗಡೆ ಮಾಡಲಾಗಿದೆ.

ಈ ಚೀನಿ ವೈರಸ್‌ ಪತ್ತೆಯಾದ ಬಳಿಕ ಇಂದು ಆರೋಗ್ಯ ಸಚಿವ ದಿನೇಶ್‌ ಗುಂಡುರಾವ್‌ ಅವರು ಮಧ್ಯಾಹ್ನದ ವೇಳೆಗೆ ತುರ್ತು ಸಭೆ ಕರೆದಿದ್ದಾರೆ. ಅಲ್ಲದೇ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ವೈರಸ್‌ ಪತ್ತೆಯಾದ ಬಗ್ಗೆ ಎಲ್ಲಾ ಡಿಎಚ್‌ಓಗಳಿಂದ ಆರೋಗ್ಯ ಇಲಾಕೆ ಮಾಹಿತಿ ನೀಡುವಂತೆ ಸೂಚಿಸಿದೆ. ಜೊತೆಗೆ ಪ್ರತಿಯೊಂದು ಡೇಟಾವನ್ನು ಪತ್ತೆ ಹಚ್ಚಬೇಕು. ಒಂದು ವೇಳೆ ವೈರಸ್‌ ದೃಢಪಟ್ಟರೆ ಟ್ರಾವೆಲ್‌ ಹಿಸ್ಟರಿಯನ್ನು ಪತ್ತೆ ಹಚ್ಚಬೇಕು ಎಂದು ಆದೇಶಿದೆ.

ವೈರಸ್‌ ತಡೆಗಟ್ಟಲು ಏನು ಮಾಡಬೇಕು?

1.ಕೆಮ್ಮುವಾಗ ಅಥವಾ ಸೀನುವಾಗ, ಬಾಯಿ ಮತ್ತು ಮೂಗನ್ನು ಕರವಸ್ತ್ರ ಅಥವಾ ಟಿಶ್ಯೂ ಪೇಪರ್‌ನಿಂದ ಮುಚ್ಚಿಕೊಳ್ಳಬೇಕು.
2.ಕೈಗಳನ್ನು ಸಾಬೂನು ಮತ್ತು ನೀರು ಅಥವಾ ಆಲ್ಕೋಹಾಲ್ ಆಧಾರಿತ ಸ್ಯಾನಿಟೈಜರ್‌ನಿಂದ ಹೆಚ್ಚಾಗಿ ತೊಳೆಯಬೇಕು.
3.ಜನಸಂದಣಿ ಇರುವ ಸ್ಥಳಗಳನ್ನು ತಪ್ಪಿಸಬೇಕು.
4.ಜ್ವರ, ಕೆಮ್ಮು ಮತ್ತು ಸೀನುವಿಕೆ ಇದ್ದಲ್ಲಿ ಸಾರ್ವಜನಿಕ ಸ್ಥಳಗಳಿಂದ ದೂರವಿರಬೇಕು.
5.ಮನೆಯಲ್ಲಿಯೇ ಇರಬೇಕು ಹಾಗೂ ನೀವು ಅನಾರೋಗ್ಯದಿಂದ ಬಳಲುತ್ತಿದ್ದರೆ ಇತರರೊಂದಿಗೆ ಸಂಪರ್ಕವನ್ನು ಮಿತಿಗೊಳಿಸಬೇಕು.
6. ಸಾಕಷ್ಟು ನೀರು ಕುಡಿಯಿರಿ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸಬೇಕು.

ಏನು ಮಾಡಬಾರದು?

1. ಟಿಶ್ಯೂ ಪೇಪರ್ ಹಾಗೂ ಕೈ ಕರ್ಚೀಫ್ ಮರುಬಳಕೆ ಬಾರದು
2.ಅನಾರೋಗ್ಯದ ಜನರೊಂದಿಗೆ ನಿಕಟ ಸಂಪರ್ಕ, ಟವೆಲ್, ಲಿನಿನ್ ಇತ್ಯಾದಿಗಳನ್ನು ಹಂಚಿಕೊಳ್ಳಬಾರದು.
3.ಕಣ್ಣು, ಮೂಗು ಹಾಗೂ ಬಾಯಿಯನ್ನು ಆಗಾಗ್ಗೆ ಸ್ಪರ್ಶಿಸಬಾರದು.
4.ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು.
5.ವೈದ್ಯರನ್ನು ಸಂಪರ್ಕಿಸದೆ ಔಷಧಿ ಸೇವಿಸಬಾರದು.

 

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

13 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

13 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

13 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

13 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

13 hours ago