ಬೆಂಗಳೂರು: ಇಲ್ಲಿನ 8 ತಿಂಗಳ ಪುಟ್ಟು ಮಗುವಿಗೆ ಎಚ್ಎಂಪಿವಿ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯೂ ಅಲರ್ಟ್ ಆಗಿದ್ದು, ಇಲಾಖೆ ವತಿಯಿಂದ ಹೊಸ ಗೈಡ್ಲೈನ್ಸ್ ಅನ್ನು ಬಿಡುಗಡೆ ಮಾಡಲಾಗಿದೆ.
ಈ ಚೀನಿ ವೈರಸ್ ಪತ್ತೆಯಾದ ಬಳಿಕ ಇಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಅವರು ಮಧ್ಯಾಹ್ನದ ವೇಳೆಗೆ ತುರ್ತು ಸಭೆ ಕರೆದಿದ್ದಾರೆ. ಅಲ್ಲದೇ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ವೈರಸ್ ಪತ್ತೆಯಾದ ಬಗ್ಗೆ ಎಲ್ಲಾ ಡಿಎಚ್ಓಗಳಿಂದ ಆರೋಗ್ಯ ಇಲಾಕೆ ಮಾಹಿತಿ ನೀಡುವಂತೆ ಸೂಚಿಸಿದೆ. ಜೊತೆಗೆ ಪ್ರತಿಯೊಂದು ಡೇಟಾವನ್ನು ಪತ್ತೆ ಹಚ್ಚಬೇಕು. ಒಂದು ವೇಳೆ ವೈರಸ್ ದೃಢಪಟ್ಟರೆ ಟ್ರಾವೆಲ್ ಹಿಸ್ಟರಿಯನ್ನು ಪತ್ತೆ ಹಚ್ಚಬೇಕು ಎಂದು ಆದೇಶಿದೆ.
ವೈರಸ್ ತಡೆಗಟ್ಟಲು ಏನು ಮಾಡಬೇಕು?
1.ಕೆಮ್ಮುವಾಗ ಅಥವಾ ಸೀನುವಾಗ, ಬಾಯಿ ಮತ್ತು ಮೂಗನ್ನು ಕರವಸ್ತ್ರ ಅಥವಾ ಟಿಶ್ಯೂ ಪೇಪರ್ನಿಂದ ಮುಚ್ಚಿಕೊಳ್ಳಬೇಕು.
2.ಕೈಗಳನ್ನು ಸಾಬೂನು ಮತ್ತು ನೀರು ಅಥವಾ ಆಲ್ಕೋಹಾಲ್ ಆಧಾರಿತ ಸ್ಯಾನಿಟೈಜರ್ನಿಂದ ಹೆಚ್ಚಾಗಿ ತೊಳೆಯಬೇಕು.
3.ಜನಸಂದಣಿ ಇರುವ ಸ್ಥಳಗಳನ್ನು ತಪ್ಪಿಸಬೇಕು.
4.ಜ್ವರ, ಕೆಮ್ಮು ಮತ್ತು ಸೀನುವಿಕೆ ಇದ್ದಲ್ಲಿ ಸಾರ್ವಜನಿಕ ಸ್ಥಳಗಳಿಂದ ದೂರವಿರಬೇಕು.
5.ಮನೆಯಲ್ಲಿಯೇ ಇರಬೇಕು ಹಾಗೂ ನೀವು ಅನಾರೋಗ್ಯದಿಂದ ಬಳಲುತ್ತಿದ್ದರೆ ಇತರರೊಂದಿಗೆ ಸಂಪರ್ಕವನ್ನು ಮಿತಿಗೊಳಿಸಬೇಕು.
6. ಸಾಕಷ್ಟು ನೀರು ಕುಡಿಯಿರಿ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸಬೇಕು.
ಏನು ಮಾಡಬಾರದು?
1. ಟಿಶ್ಯೂ ಪೇಪರ್ ಹಾಗೂ ಕೈ ಕರ್ಚೀಫ್ ಮರುಬಳಕೆ ಬಾರದು
2.ಅನಾರೋಗ್ಯದ ಜನರೊಂದಿಗೆ ನಿಕಟ ಸಂಪರ್ಕ, ಟವೆಲ್, ಲಿನಿನ್ ಇತ್ಯಾದಿಗಳನ್ನು ಹಂಚಿಕೊಳ್ಳಬಾರದು.
3.ಕಣ್ಣು, ಮೂಗು ಹಾಗೂ ಬಾಯಿಯನ್ನು ಆಗಾಗ್ಗೆ ಸ್ಪರ್ಶಿಸಬಾರದು.
4.ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು.
5.ವೈದ್ಯರನ್ನು ಸಂಪರ್ಕಿಸದೆ ಔಷಧಿ ಸೇವಿಸಬಾರದು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…