ರಾಜ್ಯ

ಸರ್ಕಾರಿ ಕಟ್ಟದ ಮೇಲೆ ಹನುಮ ಧ್ವಜ ಹಾರಿಸುವುದು ಅಕ್ರಮ: ಪರಮೇಶ್ವರ್‌

ತುಮಕೂರು: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಹನುಮಧ್ವಜ ಹಾರಿಸಿದವರ ವಿರುದ್ಧ ಪೊಲೀಸರು ಕೈಗೊಂಡ ಕ್ರಮವನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಸಮರ್ಥಿಸಿಕೊಂಡಿದ್ದಾರೆ.

ಸರ್ಕಾರಿ ಆವರಣದಲ್ಲಿ, ಸರ್ಕಾರಿ ಕಟ್ಟದ ಮೇಲೆ ಹನುಮ ಧ್ವಜ ಹಾರಿಸುವುದು ಅಕ್ರಮ. ಇದರಿಂದ ಗಲಾಟೆಯಾಗಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಸರ್ಕಾರಿ ಕಟ್ಟಡಗಳ ಬದಲಿಗೆ ದೇವಸ್ಥಾನಗಳು ಮತ್ತು ಖಾಸಗಿ ಸ್ಥಳಗಳಲ್ಲಿ ಜನರು ಕೇಸರಿ ಧ್ವಜ ಹಾರಿಸಲಿ. ಅದಕ್ಕೆ ಯಾವುದೇ ತಕರಾರು ಇರುವುದಿಲ್ಲ. ಆದರೆ, ಸರ್ಕಾರಿ ಜಾಗದಲ್ಲಿ ಹಾರಿಸಬಾರದು. ಇದು ಸಮಾಜದಲ್ಲಿ ಶಾಂತಿ ಕದಡುವ ಕೆಲಸವಾಗಿದೆ ಈ ಬಗ್ಗೆ ಪೊಲೀಸರು ಕೈಗೊಂಡಿರುವ ಕ್ರಮ ಸರಿಯಾಗಿದೆ ಎಂದು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಸರಿ ಧ್ವಜ ಹಾರಿಸಲು ಅನುಮತಿ‌ ನೀಡಿರಲಿಲ್ಲ. ಹಾಗಾಗಿ ಪಂಚಾಯಿತಿ ಅಧಿಕಾರಿಗಳು ಕೇಸರಿ ಧ್ವಜ ತೆಗೆದು, ರಾಷ್ಟ್ರಧ್ವಜ ಹಾರಿಸಿದ್ದಾರೆಂದು ಹೇಳಿದರು.

‘ಕಾಂಗ್ರೆಸ್‌ನವರು ಹಿಂದೂ ವಿರೋಧಿಗಳು ಎಂದು ಬಿಂಬಿಸಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ. ಆದರೆ, ನಾವು ಕೂಡ ಹಿಂದೂಗಳೇ, ಕಾನೂನಿನ ಚೌಕಟ್ಟಿನಲ್ಲಿರಿ ಎಂದು ನಾವು ಹೇಳುತ್ತಿದ್ದೇವೆ. ಇದೇ ಅವರಿಗೂ ನಮಗೂ ಇರುವ ವ್ಯತ್ಯಾಸ ಎಂದರು.

ಈ ರಾಜ್ಯದಲ್ಲಿ ಕಾನೂನಿದೆ, ಕಾನೂನನ್ನ ಮುರಿಯುವ ಕೆಲಸ ಮಾಡಬೇಡಿ ಎಂದು ನಾವು ಹೇಳುತ್ತಿದ್ದೇವೆ. ಅವರು ರಾಜಕೀಯ ಹೇಳಿಕೆಗಳನ್ನ ಕೊಡುತ್ತಿದ್ದಾರೆ. ಇದು ಕೂಡ ಅಂಥದ್ದೇ ಒಂದು ಘಟನೆ. ಅದು ಪೂರ್ವನಿಯೋಜಿತನೋ, ಏನೋ ಅನ್ನೋದು ನನಗೆ ಗೊತ್ತಿಲ್ಲ. ಅವರು ಅನುಮತಿ ಪಡೆದಿದ್ದೆ ಬೇರೆಯದಕ್ಕೆ, ಮಾಡಿದ್ದೆ ಬೇರೆ ಎಂದು ಹೇಳಿದರು.

ರಾಷ್ಟ್ರಧ್ವಜ ಹಾಕುತ್ತೇವೆ ಎಂದು ಊರಿನವರೆಲ್ಲ ಹೇಳಿದ್ದು ಒಳ್ಳೆಯದೇ. ಆದರೆ ನಂತರ ಬೇರೆಯ ಧ್ವಜವನ್ನ ಹಾಕಿದ್ದಾರೆ. ಅದಾದ ಬಳಿಕ ಬೇರೆ ಬೇರೆಯವರು ಬೇರೆ ಧ್ವಜ ಹಾಕುತ್ತೇವೆ ಎಂದು ಹೇಳಿದ್ದಾರೆ. ಕೆಲವರು ಅಂಬೇಡ್ಕರ್, ಕೆಲವರು ಕೆಂಪೇಗೌಡ ಧ್ವಜ ಹಾರಿಸುತ್ತೇವೆ ಎಂದಿದ್ದಾರೆ. ಹೀಗಾಗಿ ಶಾಂತಿ ಕದಡುವ ಕೆಲಸ ಆಗಬಾರದು ಎಂದು ಬೇಸರ ವ್ಯಕ್ತಪಡಿಸಿದರು.

andolanait

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

11 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago