ರಾಜ್ಯ

ಸರ್ಕಾರಿ ಕಟ್ಟದ ಮೇಲೆ ಹನುಮ ಧ್ವಜ ಹಾರಿಸುವುದು ಅಕ್ರಮ: ಪರಮೇಶ್ವರ್‌

ತುಮಕೂರು: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಹನುಮಧ್ವಜ ಹಾರಿಸಿದವರ ವಿರುದ್ಧ ಪೊಲೀಸರು ಕೈಗೊಂಡ ಕ್ರಮವನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಸಮರ್ಥಿಸಿಕೊಂಡಿದ್ದಾರೆ.

ಸರ್ಕಾರಿ ಆವರಣದಲ್ಲಿ, ಸರ್ಕಾರಿ ಕಟ್ಟದ ಮೇಲೆ ಹನುಮ ಧ್ವಜ ಹಾರಿಸುವುದು ಅಕ್ರಮ. ಇದರಿಂದ ಗಲಾಟೆಯಾಗಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಸರ್ಕಾರಿ ಕಟ್ಟಡಗಳ ಬದಲಿಗೆ ದೇವಸ್ಥಾನಗಳು ಮತ್ತು ಖಾಸಗಿ ಸ್ಥಳಗಳಲ್ಲಿ ಜನರು ಕೇಸರಿ ಧ್ವಜ ಹಾರಿಸಲಿ. ಅದಕ್ಕೆ ಯಾವುದೇ ತಕರಾರು ಇರುವುದಿಲ್ಲ. ಆದರೆ, ಸರ್ಕಾರಿ ಜಾಗದಲ್ಲಿ ಹಾರಿಸಬಾರದು. ಇದು ಸಮಾಜದಲ್ಲಿ ಶಾಂತಿ ಕದಡುವ ಕೆಲಸವಾಗಿದೆ ಈ ಬಗ್ಗೆ ಪೊಲೀಸರು ಕೈಗೊಂಡಿರುವ ಕ್ರಮ ಸರಿಯಾಗಿದೆ ಎಂದು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಸರಿ ಧ್ವಜ ಹಾರಿಸಲು ಅನುಮತಿ‌ ನೀಡಿರಲಿಲ್ಲ. ಹಾಗಾಗಿ ಪಂಚಾಯಿತಿ ಅಧಿಕಾರಿಗಳು ಕೇಸರಿ ಧ್ವಜ ತೆಗೆದು, ರಾಷ್ಟ್ರಧ್ವಜ ಹಾರಿಸಿದ್ದಾರೆಂದು ಹೇಳಿದರು.

‘ಕಾಂಗ್ರೆಸ್‌ನವರು ಹಿಂದೂ ವಿರೋಧಿಗಳು ಎಂದು ಬಿಂಬಿಸಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ. ಆದರೆ, ನಾವು ಕೂಡ ಹಿಂದೂಗಳೇ, ಕಾನೂನಿನ ಚೌಕಟ್ಟಿನಲ್ಲಿರಿ ಎಂದು ನಾವು ಹೇಳುತ್ತಿದ್ದೇವೆ. ಇದೇ ಅವರಿಗೂ ನಮಗೂ ಇರುವ ವ್ಯತ್ಯಾಸ ಎಂದರು.

ಈ ರಾಜ್ಯದಲ್ಲಿ ಕಾನೂನಿದೆ, ಕಾನೂನನ್ನ ಮುರಿಯುವ ಕೆಲಸ ಮಾಡಬೇಡಿ ಎಂದು ನಾವು ಹೇಳುತ್ತಿದ್ದೇವೆ. ಅವರು ರಾಜಕೀಯ ಹೇಳಿಕೆಗಳನ್ನ ಕೊಡುತ್ತಿದ್ದಾರೆ. ಇದು ಕೂಡ ಅಂಥದ್ದೇ ಒಂದು ಘಟನೆ. ಅದು ಪೂರ್ವನಿಯೋಜಿತನೋ, ಏನೋ ಅನ್ನೋದು ನನಗೆ ಗೊತ್ತಿಲ್ಲ. ಅವರು ಅನುಮತಿ ಪಡೆದಿದ್ದೆ ಬೇರೆಯದಕ್ಕೆ, ಮಾಡಿದ್ದೆ ಬೇರೆ ಎಂದು ಹೇಳಿದರು.

ರಾಷ್ಟ್ರಧ್ವಜ ಹಾಕುತ್ತೇವೆ ಎಂದು ಊರಿನವರೆಲ್ಲ ಹೇಳಿದ್ದು ಒಳ್ಳೆಯದೇ. ಆದರೆ ನಂತರ ಬೇರೆಯ ಧ್ವಜವನ್ನ ಹಾಕಿದ್ದಾರೆ. ಅದಾದ ಬಳಿಕ ಬೇರೆ ಬೇರೆಯವರು ಬೇರೆ ಧ್ವಜ ಹಾಕುತ್ತೇವೆ ಎಂದು ಹೇಳಿದ್ದಾರೆ. ಕೆಲವರು ಅಂಬೇಡ್ಕರ್, ಕೆಲವರು ಕೆಂಪೇಗೌಡ ಧ್ವಜ ಹಾರಿಸುತ್ತೇವೆ ಎಂದಿದ್ದಾರೆ. ಹೀಗಾಗಿ ಶಾಂತಿ ಕದಡುವ ಕೆಲಸ ಆಗಬಾರದು ಎಂದು ಬೇಸರ ವ್ಯಕ್ತಪಡಿಸಿದರು.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago