ರಾಜ್ಯ

ಸರ್ಕಾರಿ ಕಟ್ಟದ ಮೇಲೆ ಹನುಮ ಧ್ವಜ ಹಾರಿಸುವುದು ಅಕ್ರಮ: ಪರಮೇಶ್ವರ್‌

ತುಮಕೂರು: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಹನುಮಧ್ವಜ ಹಾರಿಸಿದವರ ವಿರುದ್ಧ ಪೊಲೀಸರು ಕೈಗೊಂಡ ಕ್ರಮವನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಸಮರ್ಥಿಸಿಕೊಂಡಿದ್ದಾರೆ.

ಸರ್ಕಾರಿ ಆವರಣದಲ್ಲಿ, ಸರ್ಕಾರಿ ಕಟ್ಟದ ಮೇಲೆ ಹನುಮ ಧ್ವಜ ಹಾರಿಸುವುದು ಅಕ್ರಮ. ಇದರಿಂದ ಗಲಾಟೆಯಾಗಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಸರ್ಕಾರಿ ಕಟ್ಟಡಗಳ ಬದಲಿಗೆ ದೇವಸ್ಥಾನಗಳು ಮತ್ತು ಖಾಸಗಿ ಸ್ಥಳಗಳಲ್ಲಿ ಜನರು ಕೇಸರಿ ಧ್ವಜ ಹಾರಿಸಲಿ. ಅದಕ್ಕೆ ಯಾವುದೇ ತಕರಾರು ಇರುವುದಿಲ್ಲ. ಆದರೆ, ಸರ್ಕಾರಿ ಜಾಗದಲ್ಲಿ ಹಾರಿಸಬಾರದು. ಇದು ಸಮಾಜದಲ್ಲಿ ಶಾಂತಿ ಕದಡುವ ಕೆಲಸವಾಗಿದೆ ಈ ಬಗ್ಗೆ ಪೊಲೀಸರು ಕೈಗೊಂಡಿರುವ ಕ್ರಮ ಸರಿಯಾಗಿದೆ ಎಂದು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಸರಿ ಧ್ವಜ ಹಾರಿಸಲು ಅನುಮತಿ‌ ನೀಡಿರಲಿಲ್ಲ. ಹಾಗಾಗಿ ಪಂಚಾಯಿತಿ ಅಧಿಕಾರಿಗಳು ಕೇಸರಿ ಧ್ವಜ ತೆಗೆದು, ರಾಷ್ಟ್ರಧ್ವಜ ಹಾರಿಸಿದ್ದಾರೆಂದು ಹೇಳಿದರು.

‘ಕಾಂಗ್ರೆಸ್‌ನವರು ಹಿಂದೂ ವಿರೋಧಿಗಳು ಎಂದು ಬಿಂಬಿಸಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ. ಆದರೆ, ನಾವು ಕೂಡ ಹಿಂದೂಗಳೇ, ಕಾನೂನಿನ ಚೌಕಟ್ಟಿನಲ್ಲಿರಿ ಎಂದು ನಾವು ಹೇಳುತ್ತಿದ್ದೇವೆ. ಇದೇ ಅವರಿಗೂ ನಮಗೂ ಇರುವ ವ್ಯತ್ಯಾಸ ಎಂದರು.

ಈ ರಾಜ್ಯದಲ್ಲಿ ಕಾನೂನಿದೆ, ಕಾನೂನನ್ನ ಮುರಿಯುವ ಕೆಲಸ ಮಾಡಬೇಡಿ ಎಂದು ನಾವು ಹೇಳುತ್ತಿದ್ದೇವೆ. ಅವರು ರಾಜಕೀಯ ಹೇಳಿಕೆಗಳನ್ನ ಕೊಡುತ್ತಿದ್ದಾರೆ. ಇದು ಕೂಡ ಅಂಥದ್ದೇ ಒಂದು ಘಟನೆ. ಅದು ಪೂರ್ವನಿಯೋಜಿತನೋ, ಏನೋ ಅನ್ನೋದು ನನಗೆ ಗೊತ್ತಿಲ್ಲ. ಅವರು ಅನುಮತಿ ಪಡೆದಿದ್ದೆ ಬೇರೆಯದಕ್ಕೆ, ಮಾಡಿದ್ದೆ ಬೇರೆ ಎಂದು ಹೇಳಿದರು.

ರಾಷ್ಟ್ರಧ್ವಜ ಹಾಕುತ್ತೇವೆ ಎಂದು ಊರಿನವರೆಲ್ಲ ಹೇಳಿದ್ದು ಒಳ್ಳೆಯದೇ. ಆದರೆ ನಂತರ ಬೇರೆಯ ಧ್ವಜವನ್ನ ಹಾಕಿದ್ದಾರೆ. ಅದಾದ ಬಳಿಕ ಬೇರೆ ಬೇರೆಯವರು ಬೇರೆ ಧ್ವಜ ಹಾಕುತ್ತೇವೆ ಎಂದು ಹೇಳಿದ್ದಾರೆ. ಕೆಲವರು ಅಂಬೇಡ್ಕರ್, ಕೆಲವರು ಕೆಂಪೇಗೌಡ ಧ್ವಜ ಹಾರಿಸುತ್ತೇವೆ ಎಂದಿದ್ದಾರೆ. ಹೀಗಾಗಿ ಶಾಂತಿ ಕದಡುವ ಕೆಲಸ ಆಗಬಾರದು ಎಂದು ಬೇಸರ ವ್ಯಕ್ತಪಡಿಸಿದರು.

andolanait

Recent Posts

ಚಾಮರಾಜನಗರ: ಹುಲಿ ದಾಳಿಗೆ 3 ಮೇಕೆಗಳು ಬಲಿ

ಪ್ರಸಾದ್‌ ಲಕ್ಕೂರು: ಚಾಮರಾಜನಗರ ಜಿಲ್ಲಾ ವರದಿಗಾರರು  ಚಾಮರಾಜನಗರ: ತಾಲ್ಲೂಕಿನ ಬಡಗಲಪುರ ಗ್ರಾಮ ಸಮೀಪದ ಜಮೀನಿನ ಬಳಿ ಹುಲಿ ದಾಳಿಗೆ 3…

19 mins ago

ಇರಾನ್‌ ಮೇಲೆ ಅಮೇರಿಕಾ ವಾಯುದಾಳಿ: ರೇಡಾರ್‌ ಕೇಂದ್ರಗಳು ಧ್ವಂಸ

ವಾಷಿಂಗ್ಟನ್:‌ ಅಮೇರಿಕಾ ವಾರಾಂತ್ಯದಲ್ಲಿ ಇರಾನ್‌ನ ರಾಡಾರ್‌ ಮತ್ತು ಡ್ರೋನ್‌ ನಿಯಂತ್ರಣ ಕೇಂದ್ರಗಳ ಮೇಲೆ ರಕ್ಷಣಾತ್ಮಕ ದಾಳಿ ನಡೆಸಿದೆ. ಇರಾನ್‌ನ ಗೊರುಕ್‌…

24 mins ago

ಸುಪ್ರೀಂಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳ ನೇಮಕ

ನವದೆಹಲಿ: ಸುಪ್ರೀಂಕೋರ್ಟ್‍ಗೆ ಐವರು ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ. ನ್ಯಾಯಮೂರ್ತಿಗಳಾಗಿ ನ್ಯಾ.ವೆಂಕಿಟ ಸುಬ್ರಮಣಿ ಮೋಹನ, ನ್ಯಾ.ಚಂದ್ರಶೇಖರ್ (ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ),…

1 hour ago

ಮೋದಿ ಮಿತವ್ಯಯ ಕರೆ ಎಫೆಕ್ಟ್:‌ ಚಿನ್ನ ಆಮದು 70% ಇಳಿಕೆ

ಬೆಂಗಳೂರು: ದೇಶದಲ್ಲಿ ಚಿನ್ನದ ಖರೀದಿ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಇದರ ಪರಿಣಾಮವಾಗಿ ಚಿನ್ನದ ಆಮದು ಪ್ರಮಾಣದಲ್ಲೂ ಭಾರೀ ಇಳಿಕೆ ಕಂಡುಬಂದಿದೆ.…

1 hour ago

ರಾಜ್ಯಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್‌ನಲ್ಲಿ ತೀವ್ರ ಪೈಪೋಟಿ

ಬೆಂಗಳೂರು : ಇದೇ ತಿಂಗಳ 18 ರಂದು ನಡೆಯಲಿರುವ ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆಗೆ ಎನ್‍ಡಿಎ ಮೈತ್ರಿಪಕ್ಷಗಳಾದ ಬಿಜೆಪಿ ಹಾಗೂ…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರು ವಾರದ ಅಂಕಣ | ಬದಲಾಗಿದೆ ರಾಜ್ಯ ರಾಜಕಾರಣದ ಸೂತ್ರ

ರಾಜ್ಯ ರಾಜಕಾರಣ ಮಗ್ಗಲು ಬದಲಿಸಿದೆ. ಸಿಎಂ ಹುದ್ದೆಯಿಂದ ಸಿದ್ದರಾಮಯ್ಯ ಅವರು ಕೆಳಗಿಳಿದು ಡಿ.ಕೆ.ಶಿವಕುಮಾರ್ ಬಂದು ಕೂರುವ ಬೆಳವಣಿಗೆಯೊಂದಿಗೆ ರಾಜ್ಯ ರಾಜಕಾರಣದ…

6 hours ago