ರಾಜ್ಯ

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಗಡುವು ವಿಧಿಸಿದೆ.

ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ಕೋರಿ ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗ ಮನವಿ ಸಲ್ಲಿಸಿದ್ದವು. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪುಲ್ ಪಂಚೋಲಿ ಅವರನ್ನು ಒಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ಆದರೆ ಮತ್ತೊಮ್ಮೆ ಅವಧಿಯನ್ನು ಯಾವುದೇ ಕಾರಣಕ್ಕೂ ವಿಸ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ರಾಜ್ಯ ಸಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳಲ್ಲಿ, ರಾಜ್ಯ ಸಿಬ್ಬಂದಿ ಜನಗಣತಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್), ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಮಂಡಳಿ ಪರೀಕ್ಷೆಗಳು ಇತ್ಯಾದಿಗಳಲ್ಲಿ ನಿರತರಾಗಿದ್ದಾರೆ. ಹೀಗಾಗಿ ಜೂ.೩೦ರಿಂದ ಅನ್ವಯವಾಗುವಂತೆ ಹೆಚ್ಚುವರಿ ಮೂರು ತಿಂಗಳ ಸಮಯ ನೀಡಬೇಕು ಎಂದು ಮನವಿ ಮಾಡಿದ್ದವು.

ಜೂನ್ ೩೦ರೊಳಗೆ ಚುನಾವಣೆಗಳನ್ನು ಪೂರ್ಣಗೊಳಿಸಲು ನಿರ್ದೇಶಿಸಿದ್ದ ಸರ್ವೋಚ್ಚ ನ್ಯಾಯಾಲಯದ ಜನವರಿ ೧೨ರ ಆದೇಶವನ್ನು ಮಾರ್ಪಡಿಸುವಂತೆ ಕೋರಿದ್ದವು. ನ್ಯಾಯಾಲಯದ ನಿರ್ದೇಶನದಂತೆ ಚುನಾವಣೆಗಳನ್ನು ಪೂರ್ಣಗೊಳಿಸಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಆಯೋಗವು ತನ್ನ ಅರ್ಜಯಲ್ಲಿ ತಿಳಿಸಿತ್ತು.

ವಿಚಾರಣೆ ವೇಳೆ, ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ನಡೆಯುತ್ತಿದ್ದು, ಇದಕ್ಕಾಗಿ ಸರ್ಕಾರದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಆದ್ದರಿಂದ ಚುನಾವಣಾ ಪ್ರಕ್ರಿಯೆ ನಡೆಸುವುದಕ್ಕಾಗಿ ಸಿಬ್ಬಂದಿಯ ಕೊರತೆಯಾಗುತ್ತಿದೆ. ಆದ್ದರಿಂದ ಚುನಾವಣೆಗೆ ನಿಗದಿಪಡಿಸಿರುವ ದಿನಾಂಕವನ್ನು ಎರಡು-ಮೂರು ತಿಂಗಳುಗಳ ಕಾಲ ವಿಸ್ತರಿಸಬೇಕು ಎಂದು ಕೋರಿದರು.

ಸರ್ಕಾರದ ಪರ ವಕೀಲರ ವಾದಕ್ಕೆ, ರಾಜ್ಯ ಚುನಾವಣಾ ಆಯೋಗದ ಪರ ವಕೀಲರು ಸಹಮತ ವ್ಯಕ್ತಪಡಿಸಿದರು. ಇದಕ್ಕೆ ಆಕ್ಷೇಪಿಸಿದ ಮೂಲ ಅರ್ಜಿದಾರರ ಪರ ವಕೀಲರು, ಹಲವು ವರ್ಷಗಳಿಂದ ಚುನಾವಣೆಯನ್ನು ಮುಂದೂಡಲಾಗುತ್ತಿದೆ. ಈ ಹಿಂದೆ ನಡೆದ ವಿಚಾರಣೆ ವೇಳೆ ಜೂನ್ ಅಂತ್ಯದ ವೇಳೆಗೆ ಚುನಾವಣೆ ಪೂರ್ಣಗೊಳಿಸಬೇಕು ಎಂದು ತಿಳಿಸಲಾಗಿತ್ತು. ಇದೀಗ ಮತ್ತೆ ಕಾಲಾವಕಾಶ ಕೋರುತ್ತಿದ್ದಾರೆ. ಇದಕ್ಕೆ ಅವಕಾಶ ನೀಡಬಾರದು ಎಂದು ಪೀಠವನ್ನು ಕೋರಿದರು. ವಾದ ಆಲಿಸಿದ ನ್ಯಾಯಪೀಠ, ಆಗಸ್ಟ್ ೩೧ರ ಅಂತ್ಯದ ವೇಳೆಗೆ ಚುನಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಗಡುವು ವಿಸ್ತರಿಸಿ, ವಿಚಾರಣೆಯನ್ನು ಮುಂದೂಡಿತು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

13 mins ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

15 mins ago

ಊರೊಳಗೆ ಬೆರೆತು ಜನರ ಬಣ್ಣವೇ ಆದ ಕೆ.ಟಿ.ಶಿವಪ್ರಸಾದ್

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…

21 mins ago

ಅಮೆರಿಕ ಎಂಬ ಪ್ರಯೋಗಕ್ಕೆ ಇನ್ನೂರೈವತ್ತು ವಸಂತಗಳು

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…

27 mins ago

ಓದುಗರ ಪತ್ರ: ಎಸ್‌ಐಆರ್: ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…

4 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳ ಬೇಕೇ?

ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…

4 hours ago