ರಾಜ್ಯ

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಗಡುವು ವಿಧಿಸಿದೆ.

ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ಕೋರಿ ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗ ಮನವಿ ಸಲ್ಲಿಸಿದ್ದವು. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪುಲ್ ಪಂಚೋಲಿ ಅವರನ್ನು ಒಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ಆದರೆ ಮತ್ತೊಮ್ಮೆ ಅವಧಿಯನ್ನು ಯಾವುದೇ ಕಾರಣಕ್ಕೂ ವಿಸ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ರಾಜ್ಯ ಸಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳಲ್ಲಿ, ರಾಜ್ಯ ಸಿಬ್ಬಂದಿ ಜನಗಣತಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್), ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಮಂಡಳಿ ಪರೀಕ್ಷೆಗಳು ಇತ್ಯಾದಿಗಳಲ್ಲಿ ನಿರತರಾಗಿದ್ದಾರೆ. ಹೀಗಾಗಿ ಜೂ.೩೦ರಿಂದ ಅನ್ವಯವಾಗುವಂತೆ ಹೆಚ್ಚುವರಿ ಮೂರು ತಿಂಗಳ ಸಮಯ ನೀಡಬೇಕು ಎಂದು ಮನವಿ ಮಾಡಿದ್ದವು.

ಜೂನ್ ೩೦ರೊಳಗೆ ಚುನಾವಣೆಗಳನ್ನು ಪೂರ್ಣಗೊಳಿಸಲು ನಿರ್ದೇಶಿಸಿದ್ದ ಸರ್ವೋಚ್ಚ ನ್ಯಾಯಾಲಯದ ಜನವರಿ ೧೨ರ ಆದೇಶವನ್ನು ಮಾರ್ಪಡಿಸುವಂತೆ ಕೋರಿದ್ದವು. ನ್ಯಾಯಾಲಯದ ನಿರ್ದೇಶನದಂತೆ ಚುನಾವಣೆಗಳನ್ನು ಪೂರ್ಣಗೊಳಿಸಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಆಯೋಗವು ತನ್ನ ಅರ್ಜಯಲ್ಲಿ ತಿಳಿಸಿತ್ತು.

ವಿಚಾರಣೆ ವೇಳೆ, ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ನಡೆಯುತ್ತಿದ್ದು, ಇದಕ್ಕಾಗಿ ಸರ್ಕಾರದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಆದ್ದರಿಂದ ಚುನಾವಣಾ ಪ್ರಕ್ರಿಯೆ ನಡೆಸುವುದಕ್ಕಾಗಿ ಸಿಬ್ಬಂದಿಯ ಕೊರತೆಯಾಗುತ್ತಿದೆ. ಆದ್ದರಿಂದ ಚುನಾವಣೆಗೆ ನಿಗದಿಪಡಿಸಿರುವ ದಿನಾಂಕವನ್ನು ಎರಡು-ಮೂರು ತಿಂಗಳುಗಳ ಕಾಲ ವಿಸ್ತರಿಸಬೇಕು ಎಂದು ಕೋರಿದರು.

ಸರ್ಕಾರದ ಪರ ವಕೀಲರ ವಾದಕ್ಕೆ, ರಾಜ್ಯ ಚುನಾವಣಾ ಆಯೋಗದ ಪರ ವಕೀಲರು ಸಹಮತ ವ್ಯಕ್ತಪಡಿಸಿದರು. ಇದಕ್ಕೆ ಆಕ್ಷೇಪಿಸಿದ ಮೂಲ ಅರ್ಜಿದಾರರ ಪರ ವಕೀಲರು, ಹಲವು ವರ್ಷಗಳಿಂದ ಚುನಾವಣೆಯನ್ನು ಮುಂದೂಡಲಾಗುತ್ತಿದೆ. ಈ ಹಿಂದೆ ನಡೆದ ವಿಚಾರಣೆ ವೇಳೆ ಜೂನ್ ಅಂತ್ಯದ ವೇಳೆಗೆ ಚುನಾವಣೆ ಪೂರ್ಣಗೊಳಿಸಬೇಕು ಎಂದು ತಿಳಿಸಲಾಗಿತ್ತು. ಇದೀಗ ಮತ್ತೆ ಕಾಲಾವಕಾಶ ಕೋರುತ್ತಿದ್ದಾರೆ. ಇದಕ್ಕೆ ಅವಕಾಶ ನೀಡಬಾರದು ಎಂದು ಪೀಠವನ್ನು ಕೋರಿದರು. ವಾದ ಆಲಿಸಿದ ನ್ಯಾಯಪೀಠ, ಆಗಸ್ಟ್ ೩೧ರ ಅಂತ್ಯದ ವೇಳೆಗೆ ಚುನಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಗಡುವು ವಿಸ್ತರಿಸಿ, ವಿಚಾರಣೆಯನ್ನು ಮುಂದೂಡಿತು.

 

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

11 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

12 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

14 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

14 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

17 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

18 hours ago