ರಾಜ್ಯ

ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಖರ್ಗೆ ಅವರೊಂದಿಗೆ ರಾಜಕೀಯ ವಿಚಾರಗಳನ್ನು ಚರ್ಚಿಸಿದ್ದೇನೆ ಎಂದು ಒಮ್ಮೆ ಹೇಳಿದರೆ, ಕೆಲವೇ ನಿಮಿಷಗಳಲ್ಲಿ ತಾವು ರಾಜಕೀಯಕ್ಕೆ ಸಂಬಂಧಿಸಿದಂತೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಗೊಂದಲಕಾರಿ ಹೇಳಿಕೆ ನೀಡಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೌಜನ್ಯಕ್ಕಾಗಿ ಭೇಟಿ ಮಾಡಿದ್ದೇನೆ. ನನ್ನ ಮತ್ತು ಅವರ ಕುಟುಂಬದ ನಡುವೆ ರಾಜಕೀಯ ಮೀರಿದ ಸಂಬಂಧವಿದೆ. ಭೇಟಿಯ ಸಂದರ್ಭದಲ್ಲಿ ರಾಜ್ಯ ರಾಜಕೀಯದ ಕೆಲ ವಿಚಾರಗಳನ್ನು ಅವರ ಗಮನಕ್ಕೆ ತಂದಿದ್ದೇನೆ. ಕಲಬುರಗಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದೆ. ಸಮಸ್ಯೆ ಬಗೆಹರಿಸಲು ಬಜೆಟ್‌ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡಬೇಕು ಎಂದು ಮುಖ್ಯಮಂತ್ರಿ ಅವರ ಜೊತೆಯೂ ಚರ್ಚೆ ಮಾಡಿದ್ದೇನೆ. ಖರ್ಗೆಯವರ ಗಮನಕ್ಕೂ ತಂದಿದ್ದೇನೆ. ಅದನ್ನು ಹೊರತುಪಡಿಸಿ ರಾಜ್ಯ ರಾಜಕೀಯದ ವಿಚಾರವಾಗಿ ಯಾವುದೇ ಚರ್ಚೆಗಳನ್ನು ಮಾಡಿಲ್ಲ. ಅಭಿವೃದ್ಧಿ ವಿಚಾರಗಳ ಬಗ್ಗೆ ಮಾತ್ರ ಮಾತನಾಡಿದ್ದೇನೆ ಎಂದಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್?

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ…

11 mins ago

ಕಾಂಗ್ರೆಸ್‌ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯವೇ ಎಟಿಎಂ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್‌…

12 mins ago

ಫೆ.14ರಿಂದ 18ರವರೆಗೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ: ಸಿದ್ಧತೆ ಪರಿಶೀಲಿಸಿದ ಎಈ ರಘು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…

37 mins ago

ಅಂತರರಾಷ್ಟ್ರೀಯ ವಾಣಿಜ್ಯ ಮೇಳ 2026: ಉತ್ಪಾದನೋತ್ತರ ಕೃಷಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಿ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…

1 hour ago

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ: ಕೇಂದ್ರ ಅರಣ್ಯ ಸಚಿವರ ಜೊತೆ ಎಚ್‌ಡಿಕೆ ಮಾತುಕತೆ

ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್‌…

1 hour ago

ಫೆ.10ಕ್ಕೆ ಹಸಗೂಲಿ ಪಾರ್ವತಾಂಬೆ ದೇವಸ್ಥಾನ ಮೊದಲ ವರ್ಷದ ಅರಾಧನೆ ಮಹೋತ್ಸವ

ಹಳ್ಳಿಕಾರ್ ಜೋಡೆತ್ತುಗಳ ಪ್ರದರ್ಶನ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಕಳೆದ ವರ್ಷ ಶ್ರೀ ಅಲ್ಲಹಳ್ಳಿ ಪಾರ್ವತಾಂಬೆ ನೂತನ…

1 hour ago