ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಖರ್ಗೆ ಅವರೊಂದಿಗೆ ರಾಜಕೀಯ ವಿಚಾರಗಳನ್ನು ಚರ್ಚಿಸಿದ್ದೇನೆ ಎಂದು ಒಮ್ಮೆ ಹೇಳಿದರೆ, ಕೆಲವೇ ನಿಮಿಷಗಳಲ್ಲಿ ತಾವು ರಾಜಕೀಯಕ್ಕೆ ಸಂಬಂಧಿಸಿದಂತೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಗೊಂದಲಕಾರಿ ಹೇಳಿಕೆ ನೀಡಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೌಜನ್ಯಕ್ಕಾಗಿ ಭೇಟಿ ಮಾಡಿದ್ದೇನೆ. ನನ್ನ ಮತ್ತು ಅವರ ಕುಟುಂಬದ ನಡುವೆ ರಾಜಕೀಯ ಮೀರಿದ ಸಂಬಂಧವಿದೆ. ಭೇಟಿಯ ಸಂದರ್ಭದಲ್ಲಿ ರಾಜ್ಯ ರಾಜಕೀಯದ ಕೆಲ ವಿಚಾರಗಳನ್ನು ಅವರ ಗಮನಕ್ಕೆ ತಂದಿದ್ದೇನೆ. ಕಲಬುರಗಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದೆ. ಸಮಸ್ಯೆ ಬಗೆಹರಿಸಲು ಬಜೆಟ್ನಲ್ಲಿ ಪ್ರತ್ಯೇಕ ಅನುದಾನ ಮೀಸಲಿಡಬೇಕು ಎಂದು ಮುಖ್ಯಮಂತ್ರಿ ಅವರ ಜೊತೆಯೂ ಚರ್ಚೆ ಮಾಡಿದ್ದೇನೆ. ಖರ್ಗೆಯವರ ಗಮನಕ್ಕೂ ತಂದಿದ್ದೇನೆ. ಅದನ್ನು ಹೊರತುಪಡಿಸಿ ರಾಜ್ಯ ರಾಜಕೀಯದ ವಿಚಾರವಾಗಿ ಯಾವುದೇ ಚರ್ಚೆಗಳನ್ನು ಮಾಡಿಲ್ಲ. ಅಭಿವೃದ್ಧಿ ವಿಚಾರಗಳ ಬಗ್ಗೆ ಮಾತ್ರ ಮಾತನಾಡಿದ್ದೇನೆ ಎಂದಿದ್ದಾರೆ.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…