ರಾಜ್ಯ

ದೆಹಲಿಯಲ್ಲಿ ಮುಡಾ ಹಗರಣ ಚರ್ಚೆ ಮಾಡಿದ್ದೇವೆ: ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಮುಡಾ ಹಗರಣ ಸೇರಿದಂತೆ ಪಕ್ಷ ಸಂಘಟನೆ ಬಗ್ಗೆಯೂ ಹೈಕಮಾಂಡ್‌ ಜೊತೆ ಚರ್ಚೆ ನಡೆಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ಈ ಬಗ್ಗೆ ದೆಹಲಿಯಿಂದ ಕೆಂಪೇಗೌಡ ಏರ್‌ಪೋರ್ಟ್‌ಗೆ ಬಂದಿಳಿದ ಅವರು, ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ದೆಹಲಿಗೆ ಹೋಗಿ ಹೈಕಮಾಂಡ್‌ ಜೊತೆ ಚರ್ಚೆ ಮಾಡಿದ್ದೇನೆ. ಮುಡಾ ಹಗರಣ ಒಂದೇ ಅಲ್ಲ, ಪಕ್ಷ ಸಂಘಟನೆ ಬಗ್ಗೆಯೂ ಎಲ್ಲರು  ಚರ್ಚೆ ಮಾಡಿದ್ದೇವೆ. ಸಿಎಂ, ಡಿಸಿಎಂ ಹಾಗೂ ಹಲವು ಸಚಿವರು ಸಹ ದೆಹಲಿಗೆ ಬಂದಿದ್ದರು. ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಸಂಪೂರ್ಣ ಚರ್ಚೆ ಮಾಡಿದ್ದೇವೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನೀವು ನಿರೀಕ್ಷೆ ಮಾಡಿದಂತ ವಿಚಾರಗಳು ದೆಹಲಿಯಲ್ಲಿ ಏನು ಚರ್ಚೆಯಾಗಿಲ್ಲ. ಅದರ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ.  ಸಂದರ್ಭ ಬಂದಾಗ ಅರ್ಕಾವತಿ ಡಿನೋಟಿಫಿಕೇಷನ್‌ ವರದಿ ಬಹಿರಂಗ ಮಾಡುತ್ತೇವೆ. ಸರ್ಕಾರದಲ್ಲಿ ಎಲ್ಲವೂ ಪಾರದರ್ಶಕವಾಗಿರುತ್ತದೆ. ನಾವು ಏನನ್ನೂ ಮುಚ್ಚಿಡುವ ಕೆಲಸ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶ

ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…

24 mins ago

ಮಹಾಭಾರತ: ಹೊಸ ಅರ್ಥ ಕಟ್ಟಲು ಯತ್ನಿಸಿದ ರಾಮು

ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…

30 mins ago

ಹಾಡು-ಪಾಡುವಿನ ರಾಮು ರಾಜ್ಯ

ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…

35 mins ago

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

14 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

14 hours ago