ಬೆಂಗಳೂರು: ನವೆಂಬರ್ನಲ್ಲಿ ಸಿದ್ದರಾಮಯ್ಯ ಅವಧಿ ಮುಕ್ತಾಯ ಎಂಬ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಗೃಹ ಸಚಿವ ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.ಅಶೋಕ್ ಅವರು ಯಾವಾಗ ಭವಿಷ್ಯ ಹೇಳೋದನ್ನು ಕಲಿತರು ಎಂದು ನಮಗೆ ಗೊತ್ತಾಗುತ್ತಿಲ್ಲ. ಅವರು ಹೇಳಿರುವ ಬಗ್ಗೆ ನಮ್ಮ ಪಕ್ಷದಲ್ಲಿ ಯಾವುದೇ ಬೆಳವಣಿಗೆಗಳು ನಡೆದಿಲ್ಲ. ನಾವೆಲ್ಲಾ ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಅಂದುಕೊಂಡಿದ್ದೇವೆ. ಸಿಎಲ್ಪಿ ಸಭೆಯಲ್ಲಿ ಸಿಎಂ ಆಯ್ಕೆ ಆಯ್ತು. ಆ ಸಂದರ್ಭದಲ್ಲಿ ಅವರು ಎರಡೂವರೆ ವರ್ಷ ಮಾತ್ರ ಇರುತ್ತಾರೆ ಎಂದು ನಮಗೇನೂ ಹೈಕಮಾಂಡ್ ಹೇಳಿಲ್ಲ. ಹಾಗಾಗಿ ನಾವೆಲ್ಲ ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರುತ್ತಾರೆ ಅಂದುಕೊಂಡಿದ್ದೇವೆ. ಈ ಮಧ್ಯೆ ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳುತ್ತೋ ನೋಡೋಣ ಎಂದರು.
ಇನ್ನು ಬಿ.ಆರ್.ಪಾಟೀಲ್ ರಾಜೀನಾಮೆ ವಿಚಾರವಾಗಿ ಮಾತನಾಡಿದ ಅವರು, ಅವರು ಯಾಕೆ ರಾಜೀನಾಮೆ ಕೊಟ್ಟರು ಎಂದು ಗೊತ್ತಿಲ್ಲ. ಈ ಬಗ್ಗೆ ಸಿಎಂಗೆ ಹೇಳಿರುತ್ತಾರೆ. ಅವರಿಗೆ ಏನು ಅಸಮಾಧಾನ ಎಂದು ಗೊತ್ತಿಲ್ಲ. ರಾಜೀನಾಮೆ ಕೊಟ್ಟ ಬಗ್ಗೆಯೂ ನನಗೆ ಗೊತ್ತಿಲ್ಲ ಎಂದರು.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…