ಬೆಂಗಳೂರು: ನವೆಂಬರ್ನಲ್ಲಿ ಸಿದ್ದರಾಮಯ್ಯ ಅವಧಿ ಮುಕ್ತಾಯ ಎಂಬ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಗೃಹ ಸಚಿವ ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.ಅಶೋಕ್ ಅವರು ಯಾವಾಗ ಭವಿಷ್ಯ ಹೇಳೋದನ್ನು ಕಲಿತರು ಎಂದು ನಮಗೆ ಗೊತ್ತಾಗುತ್ತಿಲ್ಲ. ಅವರು ಹೇಳಿರುವ ಬಗ್ಗೆ ನಮ್ಮ ಪಕ್ಷದಲ್ಲಿ ಯಾವುದೇ ಬೆಳವಣಿಗೆಗಳು ನಡೆದಿಲ್ಲ. ನಾವೆಲ್ಲಾ ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಅಂದುಕೊಂಡಿದ್ದೇವೆ. ಸಿಎಲ್ಪಿ ಸಭೆಯಲ್ಲಿ ಸಿಎಂ ಆಯ್ಕೆ ಆಯ್ತು. ಆ ಸಂದರ್ಭದಲ್ಲಿ ಅವರು ಎರಡೂವರೆ ವರ್ಷ ಮಾತ್ರ ಇರುತ್ತಾರೆ ಎಂದು ನಮಗೇನೂ ಹೈಕಮಾಂಡ್ ಹೇಳಿಲ್ಲ. ಹಾಗಾಗಿ ನಾವೆಲ್ಲ ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರುತ್ತಾರೆ ಅಂದುಕೊಂಡಿದ್ದೇವೆ. ಈ ಮಧ್ಯೆ ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳುತ್ತೋ ನೋಡೋಣ ಎಂದರು.
ಇನ್ನು ಬಿ.ಆರ್.ಪಾಟೀಲ್ ರಾಜೀನಾಮೆ ವಿಚಾರವಾಗಿ ಮಾತನಾಡಿದ ಅವರು, ಅವರು ಯಾಕೆ ರಾಜೀನಾಮೆ ಕೊಟ್ಟರು ಎಂದು ಗೊತ್ತಿಲ್ಲ. ಈ ಬಗ್ಗೆ ಸಿಎಂಗೆ ಹೇಳಿರುತ್ತಾರೆ. ಅವರಿಗೆ ಏನು ಅಸಮಾಧಾನ ಎಂದು ಗೊತ್ತಿಲ್ಲ. ರಾಜೀನಾಮೆ ಕೊಟ್ಟ ಬಗ್ಗೆಯೂ ನನಗೆ ಗೊತ್ತಿಲ್ಲ ಎಂದರು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…