ಬೆಂಗಳೂರು: ನವೆಂಬರ್ನಲ್ಲಿ ಸಿದ್ದರಾಮಯ್ಯ ಅವಧಿ ಮುಕ್ತಾಯ ಎಂಬ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಗೃಹ ಸಚಿವ ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್.ಅಶೋಕ್ ಅವರು ಯಾವಾಗ ಭವಿಷ್ಯ ಹೇಳೋದನ್ನು ಕಲಿತರು ಎಂದು ನಮಗೆ ಗೊತ್ತಾಗುತ್ತಿಲ್ಲ. ಅವರು ಹೇಳಿರುವ ಬಗ್ಗೆ ನಮ್ಮ ಪಕ್ಷದಲ್ಲಿ ಯಾವುದೇ ಬೆಳವಣಿಗೆಗಳು ನಡೆದಿಲ್ಲ. ನಾವೆಲ್ಲಾ ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಅಂದುಕೊಂಡಿದ್ದೇವೆ. ಸಿಎಲ್ಪಿ ಸಭೆಯಲ್ಲಿ ಸಿಎಂ ಆಯ್ಕೆ ಆಯ್ತು. ಆ ಸಂದರ್ಭದಲ್ಲಿ ಅವರು ಎರಡೂವರೆ ವರ್ಷ ಮಾತ್ರ ಇರುತ್ತಾರೆ ಎಂದು ನಮಗೇನೂ ಹೈಕಮಾಂಡ್ ಹೇಳಿಲ್ಲ. ಹಾಗಾಗಿ ನಾವೆಲ್ಲ ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರುತ್ತಾರೆ ಅಂದುಕೊಂಡಿದ್ದೇವೆ. ಈ ಮಧ್ಯೆ ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳುತ್ತೋ ನೋಡೋಣ ಎಂದರು.
ಇನ್ನು ಬಿ.ಆರ್.ಪಾಟೀಲ್ ರಾಜೀನಾಮೆ ವಿಚಾರವಾಗಿ ಮಾತನಾಡಿದ ಅವರು, ಅವರು ಯಾಕೆ ರಾಜೀನಾಮೆ ಕೊಟ್ಟರು ಎಂದು ಗೊತ್ತಿಲ್ಲ. ಈ ಬಗ್ಗೆ ಸಿಎಂಗೆ ಹೇಳಿರುತ್ತಾರೆ. ಅವರಿಗೆ ಏನು ಅಸಮಾಧಾನ ಎಂದು ಗೊತ್ತಿಲ್ಲ. ರಾಜೀನಾಮೆ ಕೊಟ್ಟ ಬಗ್ಗೆಯೂ ನನಗೆ ಗೊತ್ತಿಲ್ಲ ಎಂದರು.
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…