Mysore
26
overcast clouds

Social Media

ಮಂಗಳವಾರ, 28 ಜುಲೈ 2026
Light
Dark

ಮೈಕ್ರೋ ಫೈನಾನ್ಸ್‌ಗಳಿಗೆ ಖಡಕ್‌ ಎಚ್ಚರಿಕೆ ಕೊಟ್ಟ ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಸಾಲ ವಸೂಲಿಗಿಳಿದು ಕಿರುಕುಳ ನೀಡುವ ಫೈನಾನ್ಸ್‌ಗಳ ವಿರುದ್ಧ ಸುಮೊಟೋ ಕೇಸ್‌ ದಾಖಲಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಮಿತಿಮೀರಿದ್ದು, ಮನೆ ಬಾಗಿಲಿಗೆ ಬಂದು ಫೈನಾನ್ಸ್‌ ಸಿಬ್ಬಂದಿ ಜನತೆಗೆ ಕಿರುಕುಳ ನೀಡುತ್ತಿದ್ದಾರೆ.

ಕಿರುಕುಳದಿಂದ ಬೇಸತ್ತ ಜನರು ಆತ್ಮಹತ್ಯೆ ಮಾಡಿಕೊಂಡಿರುವ ನಿದರ್ಶನಗಳು ಇವೆ. ಈ ಹಿನ್ನೆಲೆಯಲ್ಲಿ ಮೈಕ್ರೋ ಫೈನಾನ್ಸ್‌ಗಳ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.

ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಹೊರಡಿಸಲಾಗುವುದು. ಕಿರುಕುಳ ನೀಡಿದವರ ವಿರುದ್ಧ ಸುಮೊಟೋ ಕೇಸ್‌ ದಾಖಲಿಸಲಾಗುತ್ತದೆ. ಕಿರುಕುಳದ ಬಗ್ಗೆ ಎಸ್‌ಪಿ, ಡಿಸಿಗೆ ದೂರು ಕೊಡಬಹುದು ಎಂದರು.

ಇನ್ನು ದೂರು ನೀಡಿದ ತಕ್ಷಣವೇ ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂಬಂಧ ರಾಜ್ಯಾದ್ಯಂತ ಸಹಾಯವಾಣಿ ಆರಂಭಿಸಲಾಗಿದೆ. ಸುಗ್ರೀವಾಜ್ಞೆ ಕುರಿತು ಸಭೆಯಲ್ಲಿ ಚರ್ಚೆ ನಡೆಸುತ್ತೇವೆ ಎಂದು ತಿಳಿಸಿದರು.

 

Tags:
error: Content is protected !!