ರಾಜ್ಯ

ಮೈಕ್ರೋ ಫೈನಾನ್ಸ್‌ಗಳಿಗೆ ಖಡಕ್‌ ಎಚ್ಚರಿಕೆ ಕೊಟ್ಟ ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಸಾಲ ವಸೂಲಿಗಿಳಿದು ಕಿರುಕುಳ ನೀಡುವ ಫೈನಾನ್ಸ್‌ಗಳ ವಿರುದ್ಧ ಸುಮೊಟೋ ಕೇಸ್‌ ದಾಖಲಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಮಿತಿಮೀರಿದ್ದು, ಮನೆ ಬಾಗಿಲಿಗೆ ಬಂದು ಫೈನಾನ್ಸ್‌ ಸಿಬ್ಬಂದಿ ಜನತೆಗೆ ಕಿರುಕುಳ ನೀಡುತ್ತಿದ್ದಾರೆ.

ಕಿರುಕುಳದಿಂದ ಬೇಸತ್ತ ಜನರು ಆತ್ಮಹತ್ಯೆ ಮಾಡಿಕೊಂಡಿರುವ ನಿದರ್ಶನಗಳು ಇವೆ. ಈ ಹಿನ್ನೆಲೆಯಲ್ಲಿ ಮೈಕ್ರೋ ಫೈನಾನ್ಸ್‌ಗಳ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.

ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಹೊರಡಿಸಲಾಗುವುದು. ಕಿರುಕುಳ ನೀಡಿದವರ ವಿರುದ್ಧ ಸುಮೊಟೋ ಕೇಸ್‌ ದಾಖಲಿಸಲಾಗುತ್ತದೆ. ಕಿರುಕುಳದ ಬಗ್ಗೆ ಎಸ್‌ಪಿ, ಡಿಸಿಗೆ ದೂರು ಕೊಡಬಹುದು ಎಂದರು.

ಇನ್ನು ದೂರು ನೀಡಿದ ತಕ್ಷಣವೇ ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂಬಂಧ ರಾಜ್ಯಾದ್ಯಂತ ಸಹಾಯವಾಣಿ ಆರಂಭಿಸಲಾಗಿದೆ. ಸುಗ್ರೀವಾಜ್ಞೆ ಕುರಿತು ಸಭೆಯಲ್ಲಿ ಚರ್ಚೆ ನಡೆಸುತ್ತೇವೆ ಎಂದು ತಿಳಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

4 hours ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

5 hours ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

6 hours ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

6 hours ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

7 hours ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

7 hours ago