ರಾಜ್ಯ

ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಲೆ ಆರೋಪ: ಮಹೇಶ್‌ ತಿಮರೋಡಿ ವಿರುದ್ಧ ಎಫ್‌ಐಆರ್‌ ದಾಖಲಿಸಲು ಪರಮೇಶ್ವರ್‌ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 28 ಕೊಲೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ ಮಹೇಶ್‌ ತಿಮರೋಡಿ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಗೃಹ ಸಚಿವ ಜಿ.ಪರಮೇಶ್ವರ್‌ ಸೂಚನೆ ನೀಡಿದ್ದಾರೆ.

ವಿಧಾನಸಭೆಯಲ್ಲಿಂದು ಪ್ರಶ್ನೋತ್ತರದ ಬಳಿಕ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿಷಯ ಪ್ರಸ್ತಾಪ ಮಾಡಿ, ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತನಾಡುವ ವೇಳೆ ಒಬ್ಬ ವ್ಯಕ್ತಿ ರಾಜ್ಯದ ಮುಖ್ಯಮಂತ್ರಿ 28 ಕೊಲೆ ಮಾಡಿದ್ದಾರೆ ಎಂದಿದ್ದಾರೆ. ಇದನ್ನು ಕೇಳಿದ ಬಳಿಕವೂ ಕ್ರಮ ಕೈಗೊಳ್ಳದಿದ್ದರೆ ಹೇಗೆ? ಸರ್ಕಾರ ಇಷ್ಟೊಂದು ನಿಷ್ಕ್ರಿಯವಾಗಬೇಕೆ ಎಂದು ಪ್ರಶ್ನಿಸಿದರು.

ಇದಕ್ಕೆ ದನಿಗೂಡಿಸಿದ ಬಿಜೆಪಿಯ ಸುನೀಲ್‌ಕುಮಾರ್‌, ಸುರೇಶ್‌ಕುಮಾರ್‌, ಅರಗ ಜ್ಞಾನೇಂದ್ರ ಮತ್ತಿತರರು ಮುಖ್ಯಮಂತ್ರಿ ಕೊಲೆಗಾರ ಎಂದು ಹೇಳಿರುವುದು ಈ ಸದನಕ್ಕೆ ಮಾಡಿದ ಅಪಮಾನ. ಇದನ್ನು ಸಲ್ಲಿಸಲು ಸಾಧ್ಯವಿಲ್ಲ. ಆತನ ಹೇಳಿಕೆಗಳ ಬಗ್ಗೆ ತನಿಖೆ ನಡೆಸಲು ಮತ್ತೊಂದು ಎಸ್‌‍ಐಟಿ ಮಾಡಿ ಎಂದು ಆಗ್ರಹಿಸಿದರು.

ಮಧ್ಯಪ್ರವೇಶಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಈ ರೀತಿ ಹೇಳಿಕೆ ನೀಡಿದ ವ್ಯಕ್ತಿಯ ಹೆಸರನ್ನು ಈ ಸದನದಲ್ಲಿ ಹೇಳಿ ಆತನನ್ನು ದೊಡ್ಡವನನ್ನಾಗಿ ಮಾಡಬೇಡಿ. ಆತ ಮುಖ್ಯಮಂತ್ರಿಯವರ ಬಗ್ಗೆ ಅಷ್ಟೇ ಅಲ್ಲ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಹಲವು ಬಿಜೆಪಿ ನಾಯಕರ ವಿರುದ್ಧವಾಗಿಯೂ ಮಾತನಾಡಿದ್ದಾನೆ. ಈ ಬಗ್ಗೆ ಸಿಎಂಗೆ ಮಾಹಿತಿ ಇರಲಿಲ್ಲ. ನಾನೇ ಹೋಗಿ ಅವರಿಗೆ ವಿವರಿಸಿದ್ದೇನೆ. ಅವರು ತಕ್ಷಣ ಗೃಹಸಚಿವರಿಗೆ ಸೂಚನೆ ನೀಡಿದ್ದಾರೆ. ಗೃಹಸಚಿವರು ಅಗತ್ಯ ಕ್ರಮ ಕೈಗೊಳ್ಳುತ್ತಾರೆ. ಆತ ಏನು ಹೇಳಿದ್ದಾನೆ? ಏಕೆ ಹೇಳಿದ್ದಾನೆ ಮತ್ತು ನನ್ನ ಬಗ್ಗೆ ಏನು ಮಾತನಾಡಿದ್ದಾನೆ ಎಂಬ ಎಲ್ಲಾ ಅರಿವು ನನಗೆ ಇದೆ ಎಂದರು.

ಆರ್‌.ಅಶೋಕ್‌ ಅವರು ಮಧ್ಯಪ್ರವೇಶಿಸಿ ಆತ ಹೇಳಿಕೆ ನೀಡಿ 48 ಗಂಟೆಯಾಗಿದೆ. ಸರ್ಕಾರ ಇನ್ನು ಕ್ರಮ ಕೈಗೊಂಡಿಲ್ಲ. ಡಿ.ಕೆ.ಶಿವಕುಮಾರ್‌ ಅವರು ಬೇರೆ ಎಲ್ಲ ವಿಚಾರಗಳ ಬಗ್ಗೆ ತೊಡೆ ತಟ್ಟುತ್ತಾರೆ. ಆದರೆ ಸಿದ್ದರಾಮಯ್ಯ ಅವರನ್ನು ಕೊಲೆಗಾರ ಎಂದಿರುವುದಕ್ಕೆ ಅಷ್ಟು ದೊಡ್ಡದಾಗಿ ಮಾತನಾಡದೇ ಇರುವುದು ಅಚ್ಚರಿಯಾಗಿದೆ ಎಂದು ಅನುಮಾನ ವ್ಯಕ್ತಪಡಿಸಿದರು.

ಒಟ್ಟಾರೆ ಚರ್ಚೆಗೆ ಪ್ರತಿಕ್ರಿಯಿಸಿದ ಸಚಿವ ಪರಮೇಶ್ವರ್‌, ಸರ್ಕಾರ ಅಷ್ಟೊಂದು ಅಸಹಾಯಕವಾಗಿಲ್ಲ. ಹೇಳಿಕೆ ನೀಡಿದ ವ್ಯಕ್ತಿಯ ವಿರುದ್ಧ ಹತ್ತಾರು ಪ್ರಕರಣಗಳಿವೆ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

13 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

14 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

14 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

14 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

15 hours ago