ರಾಜ್ಯ

ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಲೆ ಆರೋಪ: ಮಹೇಶ್‌ ತಿಮರೋಡಿ ವಿರುದ್ಧ ಎಫ್‌ಐಆರ್‌ ದಾಖಲಿಸಲು ಪರಮೇಶ್ವರ್‌ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 28 ಕೊಲೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ ಮಹೇಶ್‌ ತಿಮರೋಡಿ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಗೃಹ ಸಚಿವ ಜಿ.ಪರಮೇಶ್ವರ್‌ ಸೂಚನೆ ನೀಡಿದ್ದಾರೆ.

ವಿಧಾನಸಭೆಯಲ್ಲಿಂದು ಪ್ರಶ್ನೋತ್ತರದ ಬಳಿಕ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿಷಯ ಪ್ರಸ್ತಾಪ ಮಾಡಿ, ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತನಾಡುವ ವೇಳೆ ಒಬ್ಬ ವ್ಯಕ್ತಿ ರಾಜ್ಯದ ಮುಖ್ಯಮಂತ್ರಿ 28 ಕೊಲೆ ಮಾಡಿದ್ದಾರೆ ಎಂದಿದ್ದಾರೆ. ಇದನ್ನು ಕೇಳಿದ ಬಳಿಕವೂ ಕ್ರಮ ಕೈಗೊಳ್ಳದಿದ್ದರೆ ಹೇಗೆ? ಸರ್ಕಾರ ಇಷ್ಟೊಂದು ನಿಷ್ಕ್ರಿಯವಾಗಬೇಕೆ ಎಂದು ಪ್ರಶ್ನಿಸಿದರು.

ಇದಕ್ಕೆ ದನಿಗೂಡಿಸಿದ ಬಿಜೆಪಿಯ ಸುನೀಲ್‌ಕುಮಾರ್‌, ಸುರೇಶ್‌ಕುಮಾರ್‌, ಅರಗ ಜ್ಞಾನೇಂದ್ರ ಮತ್ತಿತರರು ಮುಖ್ಯಮಂತ್ರಿ ಕೊಲೆಗಾರ ಎಂದು ಹೇಳಿರುವುದು ಈ ಸದನಕ್ಕೆ ಮಾಡಿದ ಅಪಮಾನ. ಇದನ್ನು ಸಲ್ಲಿಸಲು ಸಾಧ್ಯವಿಲ್ಲ. ಆತನ ಹೇಳಿಕೆಗಳ ಬಗ್ಗೆ ತನಿಖೆ ನಡೆಸಲು ಮತ್ತೊಂದು ಎಸ್‌‍ಐಟಿ ಮಾಡಿ ಎಂದು ಆಗ್ರಹಿಸಿದರು.

ಮಧ್ಯಪ್ರವೇಶಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಈ ರೀತಿ ಹೇಳಿಕೆ ನೀಡಿದ ವ್ಯಕ್ತಿಯ ಹೆಸರನ್ನು ಈ ಸದನದಲ್ಲಿ ಹೇಳಿ ಆತನನ್ನು ದೊಡ್ಡವನನ್ನಾಗಿ ಮಾಡಬೇಡಿ. ಆತ ಮುಖ್ಯಮಂತ್ರಿಯವರ ಬಗ್ಗೆ ಅಷ್ಟೇ ಅಲ್ಲ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಹಲವು ಬಿಜೆಪಿ ನಾಯಕರ ವಿರುದ್ಧವಾಗಿಯೂ ಮಾತನಾಡಿದ್ದಾನೆ. ಈ ಬಗ್ಗೆ ಸಿಎಂಗೆ ಮಾಹಿತಿ ಇರಲಿಲ್ಲ. ನಾನೇ ಹೋಗಿ ಅವರಿಗೆ ವಿವರಿಸಿದ್ದೇನೆ. ಅವರು ತಕ್ಷಣ ಗೃಹಸಚಿವರಿಗೆ ಸೂಚನೆ ನೀಡಿದ್ದಾರೆ. ಗೃಹಸಚಿವರು ಅಗತ್ಯ ಕ್ರಮ ಕೈಗೊಳ್ಳುತ್ತಾರೆ. ಆತ ಏನು ಹೇಳಿದ್ದಾನೆ? ಏಕೆ ಹೇಳಿದ್ದಾನೆ ಮತ್ತು ನನ್ನ ಬಗ್ಗೆ ಏನು ಮಾತನಾಡಿದ್ದಾನೆ ಎಂಬ ಎಲ್ಲಾ ಅರಿವು ನನಗೆ ಇದೆ ಎಂದರು.

ಆರ್‌.ಅಶೋಕ್‌ ಅವರು ಮಧ್ಯಪ್ರವೇಶಿಸಿ ಆತ ಹೇಳಿಕೆ ನೀಡಿ 48 ಗಂಟೆಯಾಗಿದೆ. ಸರ್ಕಾರ ಇನ್ನು ಕ್ರಮ ಕೈಗೊಂಡಿಲ್ಲ. ಡಿ.ಕೆ.ಶಿವಕುಮಾರ್‌ ಅವರು ಬೇರೆ ಎಲ್ಲ ವಿಚಾರಗಳ ಬಗ್ಗೆ ತೊಡೆ ತಟ್ಟುತ್ತಾರೆ. ಆದರೆ ಸಿದ್ದರಾಮಯ್ಯ ಅವರನ್ನು ಕೊಲೆಗಾರ ಎಂದಿರುವುದಕ್ಕೆ ಅಷ್ಟು ದೊಡ್ಡದಾಗಿ ಮಾತನಾಡದೇ ಇರುವುದು ಅಚ್ಚರಿಯಾಗಿದೆ ಎಂದು ಅನುಮಾನ ವ್ಯಕ್ತಪಡಿಸಿದರು.

ಒಟ್ಟಾರೆ ಚರ್ಚೆಗೆ ಪ್ರತಿಕ್ರಿಯಿಸಿದ ಸಚಿವ ಪರಮೇಶ್ವರ್‌, ಸರ್ಕಾರ ಅಷ್ಟೊಂದು ಅಸಹಾಯಕವಾಗಿಲ್ಲ. ಹೇಳಿಕೆ ನೀಡಿದ ವ್ಯಕ್ತಿಯ ವಿರುದ್ಧ ಹತ್ತಾರು ಪ್ರಕರಣಗಳಿವೆ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

5 mins ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

19 mins ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

20 mins ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

22 mins ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

24 mins ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

29 mins ago