ಬೆಂಗಳೂರು: ಹಾಸನ ಪನ್ಡ್ರೈವ್ ಹಾಗೂ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಉಚ್ಛಾಟಿತ ಮುಖಂಡ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಈ ಬಗ್ಗೆ ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಪ್ರಜ್ವಲ್ ಬಂಧನ ಬಳಿಕ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರೆಯೆ ನೀಡಿದ್ದಾರೆ. ಆ ವೇಳೆ ಪ್ರಜ್ವಲ್ ಯಾಕೆ ಬಂದು ಅರೆಸ್ಟ್ ಆದರು ಎಂಬ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಪ್ರಜ್ವಲ್ ವಿದೇಶದಲ್ಲಿದ್ದಾ ಅವರನ್ನ ಬಂಧಿಸಿ ದೇಶಕ್ಕೆ ವಾಪಸ್ ಕರೆ ತರುವುದು ಸಾಧ್ಯವಿಲ್ಲದ ಕೆಲಸ. ಎಲ್ಲದಕ್ಕೂ ಅದರದೇ ಆದ ಪ್ರಕ್ರಿಯೆಗಳಿರುತ್ತದೆ. ಆರೋಪಿಯೊಬ್ಬ ವಿದೇಶದಲ್ಲಿ ಅಡಗಿ ಕುಳಿತಾಗ ಆತನನ್ನು ಬಂಧಿಸಲು ಕೇಂದ್ರೀಯ ತನಿಖಾ ದಳ ಇಂಟರ್ ಪೋಲ್ಗೆ ಮಾಹಿತಿ ನೀಡಿ, ನಂತರ ಬ್ಲೂ ಕರ್ನಾರ್ ನೋಟಿಸ್ ಜಾರಿಗೊಳಿಸಬೇಕಾಗುತ್ತದೆ ಎಂದರು.
ಇನ್ನು ಪ್ರಜ್ವಲ್ ರೇವಣ್ಣ ಭಾರತಕ್ಕೆ ವಾಪಸಾಗಿದ್ದರ ಮೂಲಕ ಏನೆಂಬುದರ ಬಗ್ಗೆ ಮಾತನಾಡಿರುವ ಪರಮೇಶ್ವರ್, ಈ ಬಾರಿ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಸೋಲು ಕಾಣುವುದು ನಿಶ್ಚಯವಾಗಿದೆ ಎಂದು ಭಾವಿಸಿ ಅವರು ಬಂಧನಕ್ಕೆ ಸಹಕರಿಸಿದ್ದಾರೆ. ಒಂದು ವೇಳೆ ಪ್ರಜ್ವಲ್ ಈ ಬಾರಿಯ ಚುನಾವಣೆಯಲ್ಲಿ ಸೋತರೇ, ಅವರ ಡಿಪ್ಲೋಮ್ಯಾಟಿಕ್ ಪಾಸ್ಪೋರ್ಟ್ ತಕ್ಷಣವೇ ರದ್ದಾಗಲಿದೆ. ಹೀಗಾಗಿ ಯಾವುದೇ ದಾರಿ ಇಲ್ಲದೇ ತವರಿಗೆ ಹಿಂತಿರುಗಿದ್ದಾರೆ ಎಂದು ಗೃಹ ಸಚಿವರು ಹೇಳಿದರು.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…