ಬೆಂಗಳೂರು: ಹಾಸನ ಪನ್ಡ್ರೈವ್ ಹಾಗೂ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಉಚ್ಛಾಟಿತ ಮುಖಂಡ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಈ ಬಗ್ಗೆ ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಪ್ರಜ್ವಲ್ ಬಂಧನ ಬಳಿಕ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರೆಯೆ ನೀಡಿದ್ದಾರೆ. ಆ ವೇಳೆ ಪ್ರಜ್ವಲ್ ಯಾಕೆ ಬಂದು ಅರೆಸ್ಟ್ ಆದರು ಎಂಬ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಪ್ರಜ್ವಲ್ ವಿದೇಶದಲ್ಲಿದ್ದಾ ಅವರನ್ನ ಬಂಧಿಸಿ ದೇಶಕ್ಕೆ ವಾಪಸ್ ಕರೆ ತರುವುದು ಸಾಧ್ಯವಿಲ್ಲದ ಕೆಲಸ. ಎಲ್ಲದಕ್ಕೂ ಅದರದೇ ಆದ ಪ್ರಕ್ರಿಯೆಗಳಿರುತ್ತದೆ. ಆರೋಪಿಯೊಬ್ಬ ವಿದೇಶದಲ್ಲಿ ಅಡಗಿ ಕುಳಿತಾಗ ಆತನನ್ನು ಬಂಧಿಸಲು ಕೇಂದ್ರೀಯ ತನಿಖಾ ದಳ ಇಂಟರ್ ಪೋಲ್ಗೆ ಮಾಹಿತಿ ನೀಡಿ, ನಂತರ ಬ್ಲೂ ಕರ್ನಾರ್ ನೋಟಿಸ್ ಜಾರಿಗೊಳಿಸಬೇಕಾಗುತ್ತದೆ ಎಂದರು.
ಇನ್ನು ಪ್ರಜ್ವಲ್ ರೇವಣ್ಣ ಭಾರತಕ್ಕೆ ವಾಪಸಾಗಿದ್ದರ ಮೂಲಕ ಏನೆಂಬುದರ ಬಗ್ಗೆ ಮಾತನಾಡಿರುವ ಪರಮೇಶ್ವರ್, ಈ ಬಾರಿ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಸೋಲು ಕಾಣುವುದು ನಿಶ್ಚಯವಾಗಿದೆ ಎಂದು ಭಾವಿಸಿ ಅವರು ಬಂಧನಕ್ಕೆ ಸಹಕರಿಸಿದ್ದಾರೆ. ಒಂದು ವೇಳೆ ಪ್ರಜ್ವಲ್ ಈ ಬಾರಿಯ ಚುನಾವಣೆಯಲ್ಲಿ ಸೋತರೇ, ಅವರ ಡಿಪ್ಲೋಮ್ಯಾಟಿಕ್ ಪಾಸ್ಪೋರ್ಟ್ ತಕ್ಷಣವೇ ರದ್ದಾಗಲಿದೆ. ಹೀಗಾಗಿ ಯಾವುದೇ ದಾರಿ ಇಲ್ಲದೇ ತವರಿಗೆ ಹಿಂತಿರುಗಿದ್ದಾರೆ ಎಂದು ಗೃಹ ಸಚಿವರು ಹೇಳಿದರು.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…