ರಾಜ್ಯ

ಎಸ್‌‍ಐಟಿ ತನಿಖೆ ಗಂಭೀರ ಸ್ವರೂಪದಲ್ಲಿ ನಡೆಯುತ್ತಿದೆ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಧರ್ಮಸ್ಥಳದ ವಿಚಾರವಾಗಿ ಸತ್ಯಾಂಶವನ್ನು ಜನಸಮುದಾಯಕ್ಕೆ ತಿಳಿಸುವುದು ಸರ್ಕಾರದ ಉದ್ದೇಶ. ಅದರ ಹೊರತಾಗಿ ನಮ್ಮ ಬಳಿ ಯಾವುದೇ ಗುಪ್ತ ಕಾರ್ಯ ಸೂಚಿಗಳಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌‍ಐಟಿ ತನಿಖೆ ಗಂಭೀರ ಸ್ವರೂಪದಲ್ಲಿ ನಡೆಯುತ್ತಿದೆ. ಕೋಟ್ಯಂತರ ಭಕ್ತರ ಭಾವನೆಗಳಿಗೆ ಅನುಗುಣವಾಗಿ ಎಸ್‌‍ಐಟಿ ಜವಾಬ್ದಾರಿಯಿಂದ ಕೆಲಸ ನಿರ್ವಹಿಸುತ್ತಿದೆ ಎಂದರು.

ಚಿನ್ನಯ್ಯನ ಬಂಧನದ ಬಳಿಕ ಆತ ನೀಡಿದ ಹೇಳಿಕೆ ಹಾಗೂ ಬೆಳವಣಿಗೆಗಳ ಮೇಲೆ ತನಿಖೆ ಮುಂದುವರೆಯುತ್ತಿದೆ. ಆದಷ್ಟು ಶೀಘ್ರವಾಗಿ ಇದು ಪೂರ್ಣಗೊಂಡು ವರದಿ ಮಂಡನೆಯಾಗಬೇಕು. ಜನರಿಗೆ ಸತ್ಯಾಂಶ ತಿಳಿಯಬೇಕು ಎಂಬುವುದು ನಮ್ಮ ಉದ್ದೇಶ ಎಂದರು.

ಎಸ್‌‍ಐಟಿ ರಚಿಸಿದ್ದು, ಹೂತಿಡಲಾದ ಶವಗಳ ತನಿಖೆ ಮಾಡಲು ಈಗ ಅದಕ್ಕೆ ವಿರುದ್ಧವಾಗಿ ಚಿನ್ನಯ್ಯನನ್ನು ಬಂಧಿಸಿ ತನಿಖೆ ಮಾಡಲಾಗುತ್ತಿದೆ ಎಂಬ ಆರೋಪಗಳು ಸರಿಯಲ್ಲ. ನಾವು ಯಾವುದೇ ಪೂರ್ವಗ್ರಹ ಪೀಡಿತರಾಗಿಲ್ಲ. ಎಸ್‌‍ಐಟಿ ಅಧಿಕಾರಿಗಳು ಇದೇ ರೀತಿಯ ತನಿಖೆ ಮಾಡಬೇಕು, ಇಂತವರ ಮೇಲೆ ದಾಳಿ ಮಾಡಬೇಕು ಎಂದು ನಾವು ಸೂಚನೆ ನೀಡಿಲ್ಲ.

ಈಗಾಗಲೇ ನೀಡಲಾಗಿರುವ ಕಾರ್ಯಸೂಚಿಯ ಇತಿಮಿತಿಯಲ್ಲಿ ಎಸ್‌‍ಐಟಿ ಅಧಿಕಾರಿಗಳು ಎಲ್ಲೆಲ್ಲಿ ಶೋಧ ಮಾಡಬೇಕು, ಯಾರನ್ನು ಬಂಧಿಸಬೇಕು, ಎಲ್ಲಿ ದಾಳಿ ಮಾಡಬೇಕೆಂಬುದನ್ನು ನಿರ್ಧರಿಸುತ್ತಾರೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

4 mins ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

2 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

2 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

3 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

3 hours ago

ಬೆಟ್ಟಳ್ಳಿ ಮಾರಮ್ಮನ ಜಾತ್ರೆ ; ಹನೂರಲ್ಲಿ 2 ದಿನ ಮದ್ಯ ಮಾರಾಟ ನಿಷೇಧ

ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…

3 hours ago