ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ವೈಯಕ್ತಿಕವಾಗಿದ್ದು, ಅವರ ಹೇಳಿಕೆಯಲ್ಲಿ ತಪ್ಪಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಸಮರ್ಥಿಸಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸತೀಶ್ ಜಾರಕಿಹೊಳಿ ಹೆಸರು ಪ್ರಸ್ತಾಪಿಸಿ, ಮುಂದೆ ಅಹಿಂದ ನಾಯಕ ಎಂದು ಹೇಳಿದ್ದಾರೆ. ಅವರು ಎರಡೂವರೆ ವರ್ಷಗಳ ನಂತರ ಆಗಬಹುದು. ನಾಳೆಯೇ ಜಾರಕಿಹೊಳಿ ಅವರು ಸಿಎಂ ಆಗುತ್ತಾರೆ ಎಂದೇನು ಹೇಳಿಲ್ಲ. 2028 ಕ್ಕೆ ಸಿಎಂ ಆಗಬಹುದು ಎಂದು ಹೇಳಿದ್ದಾರೆ ಎಂದರು.
ನಾನು ಸಿಎಂ ಆಕಾಂಕ್ಷಿ ಅಲ್ಲ ಅಂದಿದ್ದಾರೆ. ಆ ದೃಷ್ಟಿಯಿಂದ ಯತೀಂದ್ರ ಹೇಳಿರಬಹುದು. ಹೈಕಮಾಂಡ್ಗಿಂತ ಯತೀಂದ್ರ ಪವರ್ ಫುಲ್ ಅಂತೇನೂ ಇಲ್ಲ. ಆದರೆ, ಯತೀಂದ್ರ ಅವರ ಮಾತಿನಲ್ಲಿ ತಪ್ಪೇನೂ ಇಲ್ಲ. ಇದು ಮುಖ್ಯಮಂತ್ರಿಯವರ ಹೇಳಿಕೆಯಲ್ಲ. ನಮಗೂ ಸತೀಶ್ ಜಾರಕಿಹೊಳಿ ಸಿಎಂ ಆಗಬೇಕು ಎಂಬುದು ಇದೆ ಎಂದು ಅವರು ತಿಳಿಸಿದರು.
ಇದನ್ನು ಓದಿ: ನಮ್ಮ ತಂದೆ ರಾಜಕೀಯ ಕೊನೆಗಾಲದಲ್ಲಿದ್ದಾರೆ: ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ
ಈ ರೀತಿ ಹೇಳಿದ್ದರೂ ಯತೀಂದ್ರ ಅವರಿಗೆ ನೋಟಿಸ್ ಕೊಟ್ಟಿಲ್ಲವೆಂಬ ಪ್ರಶ್ನೆಗೆ ಪ್ರಕ್ರಿಯಿಸಿದ ಸಚಿವರು, ಅದನ್ನು ಪಕ್ಷದ ಅಧ್ಯಕ್ಷರು ಮಾಡುತ್ತಾರೆ. ಯಾರಾದರೂ ಮಾತನಾಡಿದರೆ ನೊಟೀಸ್ ಕೊಡುವುದಾಗಿ ಹೇಳಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೇವಸ್ಥಾನಕ್ಕೆ ಹೋಗುವುದರಲ್ಲಿ ತಪ್ಪೇನೂ ಇಲ್ಲ. ನಾನು ಹೋಗುತ್ತೇನೆ, ನೀವು ಹೋಗುತ್ತಿರಾ,? ಅವರಿಗೆ ಏನೋ ಹರಕೆ ಇರಬಹುದು. ಅದನ್ನು ತೀರಿಸಲು ಹೋಗಿರಬಹುದು ಎಂದು ಅವರು ಹೇಳಿದರು.
ಡಿಸೆಂಬರ್ನಲ್ಲಿ ಡಿ.ಕೆ.ಶಿವಕುಮಾರ್ ಅವರು ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಶಾಸಕಾಂಗ ಪಕ್ಷದ ಸಭೆ ಕರೆದು ತೀರ್ಮಾನಿಸಲಾಗುತ್ತದೆ. ಶಾಸಕರು ಯಾರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡುತ್ತಾರೋ ಅವರು ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಲಾಗುತ್ತದೆ. ಈಗ ಮುಖ್ಯಮಂತ್ರಿ ಇರುವುದರಿಂದ ಏಕೆ? ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುತ್ತಾರೆ ಎಂದು ಅವರು ಪ್ರಶ್ನಿಸಿದರು.
ಮೈಸೂರು : ಎಸ್ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ…
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್ಪ್ರೆಸ್…
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…
ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…
ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…