CM will resolve the MLAs' dissatisfaction: Minister G. Parameshwara
ಬೆಂಗಳೂರು: ಸಂವಿಧಾನದಿಂದ ಜಾತ್ಯಾತೀತ ಪದ ಬಿಡಬೇಕು ಎಂಬ ಆರ್ಎಸ್ಎಸ್ನ ದತ್ತಾತ್ರೇಯ ಹೊಸಬಾಳೆ ಹೇಳಿಕೆಯೇ ಅಪ್ರಸ್ತುತವಾದುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರು ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಎಸ್ಎಸ್ನ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ಸರಿಯಲ್ಲ. ಭಾರತದ ಸಂವಿಧಾನ ಸಾಕಷ್ಟು ಅಧ್ಯಯನ ಮಾಡಿದ ಬಳಿಕ ರಚನೆ ಮಾಡಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ರವರು ಬೇರೆ ಬೇರೆ ರಾಷ್ಟ್ರಗಳ ಸಂವಿಧಾನವನ್ನು ಪರಿಶೀಲಿಸಿ ಭಾರತದ ಪರಿಸ್ಥಿತಿ ಹಾಗೂ ವಿವಿಧ ಪದರಗಳನ್ನು ಅರ್ಥೈಸಿಕೊಂಡು ಜಾತ್ಯಾತೀತ ಪದವನ್ನು ಅಳವಡಿಸಿದ್ದಾರೆ ಎಂದರು.
1957ರಿಂದಲೂ ಈವರೆಗೂ ಭಾರತೀಯರಾದ ನಾವು ಸಂವಿಧಾನವನ್ನು ಪಾಲನೆ ಮಾಡಿಕೊಂಡು ಬಂದಿದ್ದೇವೆ. ಇದೊಂದು ಟೈಮ್ ಟೆಸ್ಟೆಡ್ ಸಂವಿಧಾನ. ಯಾವುದೇ ರೀತಿಯ ತೊಂದರೆ ಇಲ್ಲದಂತೆ ನಡೆದುಕೊಂಡು ಬರುತ್ತಿದೆ. ಹಾಗೆಯೇ ಮುಂದುವರೆಯಬೇಕೂ ಕೂಡ ಎಂದರು.
ಎಲ್ಲರಿಗೂ ಸಮಾನ ಅವಕಾಶ ಸಿಕ್ಕಿ, ಮುಕ್ತ ಅವಕಾಶ ಸಿಗಬೇಕು ಎಂಬುದು ಜಾತ್ಯತೀತತೆಯ ಅರ್ಥವಾಗಿದೆ. ಹೊಸಬಾಳೆಯವರು ಯಾವ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ವಿಶ್ವದಲ್ಲೇ ವೈವಿಧ್ಯತೆಯಲ್ಲಿ ಏಕತೆಯನ್ನು ಸಾಕಾರಗೊಳಿಸಿದ ಸಂವಿಧಾನ ಭಾಷೆ, ಸಂಸ್ಕೃತಿ, ಧರ್ಮದ ವಿಭಿನ್ನತೆ ನಡುವೆ ನಮ್ಮನ್ನು ಏಕತೆಯಿಂದ ಬದುಕುವಂತೆ ಮಾಡಿದೆ. ಇದನ್ನು ಬದಲಾವಣೆ ಮಾಡುವ ವಿಚಾರದಲ್ಲಿ ರಾಜಿಯ ಮಾತೇ ಇಲ್ಲ ಎಂದು ಹೇಳಿದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…