ರಾಜ್ಯ

ದತ್ತಾತ್ರೇಯ ಹೊಸಬಾಳೆ ವಿರುದ್ಧ ಗೃಹ ಸಚಿವ ಪರಮೇಶ್ವರ್‌ ಕೆಂಡಾಮಂಡಲ

ಬೆಂಗಳೂರು: ಸಂವಿಧಾನದಿಂದ ಜಾತ್ಯಾತೀತ ಪದ ಬಿಡಬೇಕು ಎಂಬ ಆರ್‍ಎಸ್‍ಎಸ್‍ನ ದತ್ತಾತ್ರೇಯ ಹೊಸಬಾಳೆ ಹೇಳಿಕೆಯೇ ಅಪ್ರಸ್ತುತವಾದುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ.

ಈ ಕುರಿತು ಬೆಂಗಳೂರು ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‍ಎಸ್‍ಎಸ್‍ನ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ಸರಿಯಲ್ಲ. ಭಾರತದ ಸಂವಿಧಾನ ಸಾಕಷ್ಟು ಅಧ್ಯಯನ ಮಾಡಿದ ಬಳಿಕ ರಚನೆ ಮಾಡಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್‌ರವರು ಬೇರೆ ಬೇರೆ ರಾಷ್ಟ್ರಗಳ ಸಂವಿಧಾನವನ್ನು ಪರಿಶೀಲಿಸಿ ಭಾರತದ ಪರಿಸ್ಥಿತಿ ಹಾಗೂ ವಿವಿಧ ಪದರಗಳನ್ನು ಅರ್ಥೈಸಿಕೊಂಡು ಜಾತ್ಯಾತೀತ ಪದವನ್ನು ಅಳವಡಿಸಿದ್ದಾರೆ ಎಂದರು.

1957ರಿಂದಲೂ ಈವರೆಗೂ ಭಾರತೀಯರಾದ ನಾವು ಸಂವಿಧಾನವನ್ನು ಪಾಲನೆ ಮಾಡಿಕೊಂಡು ಬಂದಿದ್ದೇವೆ. ಇದೊಂದು ಟೈಮ್ ಟೆಸ್ಟೆಡ್ ಸಂವಿಧಾನ. ಯಾವುದೇ ರೀತಿಯ ತೊಂದರೆ ಇಲ್ಲದಂತೆ ನಡೆದುಕೊಂಡು ಬರುತ್ತಿದೆ. ಹಾಗೆಯೇ ಮುಂದುವರೆಯಬೇಕೂ ಕೂಡ ಎಂದರು.

ಎಲ್ಲರಿಗೂ ಸಮಾನ ಅವಕಾಶ ಸಿಕ್ಕಿ, ಮುಕ್ತ ಅವಕಾಶ ಸಿಗಬೇಕು ಎಂಬುದು ಜಾತ್ಯತೀತತೆಯ ಅರ್ಥವಾಗಿದೆ. ಹೊಸಬಾಳೆಯವರು ಯಾವ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ವಿಶ್ವದಲ್ಲೇ ವೈವಿಧ್ಯತೆಯಲ್ಲಿ ಏಕತೆಯನ್ನು ಸಾಕಾರಗೊಳಿಸಿದ ಸಂವಿಧಾನ ಭಾಷೆ, ಸಂಸ್ಕೃತಿ, ಧರ್ಮದ ವಿಭಿನ್ನತೆ ನಡುವೆ ನಮ್ಮನ್ನು ಏಕತೆಯಿಂದ ಬದುಕುವಂತೆ ಮಾಡಿದೆ. ಇದನ್ನು ಬದಲಾವಣೆ ಮಾಡುವ ವಿಚಾರದಲ್ಲಿ ರಾಜಿಯ ಮಾತೇ ಇಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

7 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

8 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

10 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

10 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

13 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

14 hours ago