g parameshwar
ಮಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಕರಾವಳಿ ಹಾಗೂ ಮಲೆನಾಡಿನ ಮೂರು ಜಿಲ್ಲೆಗಳಿಗೆ ಸೀಮಿತವಾಗಿ ಕೋಮು ಹಿಂಸೆ ನಿಗ್ರಹ ವಿಶೇಷ ಕಾರ್ಯಪಡೆಯನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಲೋಕಾರ್ಪಣೆ ಮಾಡಿದರು.
ಶಾಂತಿಯ ಸಂಕೇತವಾದ ಪಾರಿವಾಳದ ಚಿಹ್ನೆಯನ್ನೊಳಗೊಂಡ ವಿಶೇಷ ಕಾರ್ಯಪಡೆ ಲಾಂಛನವನ್ನು ಹಾಗೂ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು.
ಇದೇ ವೇಳೆ ಮಾತನಾಡಿದ ಪರಮೇಶ್ವರ್ ಅವರು, ಆರು ತಿಂಗಳ ಹಿಂದೆ ಮಂಗಳೂರಿನಲ್ಲಿ ಒಂದು ಕೊಲೆಯಾಗಿತ್ತು. ಸ್ವಾಭಾವಿಕವಾಗಿ ಆತಂಕ, ಭಯದ ವಾತಾವರಣ ನಿರ್ಮಾಣವಾಗಿತ್ತು. ಆ ವೇಳೆ ಶಾಂತಿ ಸಹಬಾಳ್ವೆಯ ಪರಿಸ್ಥಿತಿಯನ್ನು ನಾನು ನೋಡಲೇ ಇಲ್ಲ. ರಾಜ್ಯದಲ್ಲಿ ಕಲೆ, ಸಂಸ್ಕೃತಿ, ಸಾಹಿತ್ಯ ಉಳಿದಿದ್ದರೆ ಅದಕ್ಕೆ ಕರಾವಳಿ ಜಿಲ್ಲೆಗಳ ಕೊಡುಗೆ ಅಪಾರವಾಗಿದೆ. ಇಲ್ಲಿನ ಕಾರ್ಯವೈಖರಿಯೇ ವಿಶೇಷವಾಗಿದೆ. ರಾಜ್ಯದಲ್ಲೇ ಮೊದಲ ಖಾಸಗಿ ವೈದ್ಯಕೀಯ ಕಾಲೇಜುಗಳು ಮಂಗಳೂರಿನಲ್ಲಿ ಆರಂಭಿಸಲಾಗಿತ್ತು. ನಾಡಿನ ಅಭಿವೃದ್ಧಿಯಲ್ಲೂ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೊಡುಗೆ ಅಪಾರವಾಗಿದೆ ಎಂದರು.
ರಾಜ್ಯದಲ್ಲಿ ಸೈಬರ್ ಅಪರಾಧಗಳನ್ನು ದಾಖಲಿಸಲು ಪ್ರತಿ ಠಾಣೆಯಲ್ಲೂ ಅವಕಾಶ ಮಾಡಿಕೊಟ್ಟಿರುವುದರಿಂದಾಗಿ ಸಂಖ್ಯೆ ಹೆಚ್ಚಾಗಿದೆ ಎನಿಸುತ್ತಿದೆ. ಸೈಬರ್ ಅಪರಾಧಗಳ ನಿಗ್ರಹಕ್ಕೆ ಪ್ರತಿಯೊಬ್ಬ ಕಾನ್ಸ್ಟೇಬಲ್ಗೂ ತರಬೇತಿ ನೀಡಲಾಗುವುದು. ಇದಕ್ಕಾಗಿ ಜಿಲ್ಲಾ ಪೊಲೀಸ್ ಕಚೇರಿಗಳಲ್ಲಿ ತರಬೇತಿ ಘಟಕ ಆರಂಭಿಸುವುದಾಗಿ ತಿಳಿಸಿದರು.
ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…
ಗಿರೀಶ್ ಹುಣಸೂರು ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮…
ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್,…
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…