ರಾಜ್ಯ

ಮಂಗಳೂರು: ಸ್ಪೆಷಲ್ ಆಕ್ಷನ್‌ ಫೋರ್ಸ್‌ಗೆ ಗೃಹ ಸಚಿವ ಪರಮೇಶ್ವರ್‌ ಚಾಲನೆ

ಮಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಕರಾವಳಿ ಹಾಗೂ ಮಲೆನಾಡಿನ ಮೂರು ಜಿಲ್ಲೆಗಳಿಗೆ ಸೀಮಿತವಾಗಿ ಕೋಮು ಹಿಂಸೆ ನಿಗ್ರಹ ವಿಶೇಷ ಕಾರ್ಯಪಡೆಯನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಲೋಕಾರ್ಪಣೆ ಮಾಡಿದರು.

ಶಾಂತಿಯ ಸಂಕೇತವಾದ ಪಾರಿವಾಳದ ಚಿಹ್ನೆಯನ್ನೊಳಗೊಂಡ ವಿಶೇಷ ಕಾರ್ಯಪಡೆ ಲಾಂಛನವನ್ನು ಹಾಗೂ ಕೈಪಿಡಿಯನ್ನು  ಬಿಡುಗಡೆಗೊಳಿಸಲಾಯಿತು.

ಇದೇ ವೇಳೆ ಮಾತನಾಡಿದ ಪರಮೇಶ್ವರ್ ಅವರು, ಆರು ತಿಂಗಳ ಹಿಂದೆ ಮಂಗಳೂರಿನಲ್ಲಿ ಒಂದು ಕೊಲೆಯಾಗಿತ್ತು. ಸ್ವಾಭಾವಿಕವಾಗಿ ಆತಂಕ, ಭಯದ ವಾತಾವರಣ ನಿರ್ಮಾಣವಾಗಿತ್ತು. ಆ ವೇಳೆ ಶಾಂತಿ ಸಹಬಾಳ್ವೆಯ ಪರಿಸ್ಥಿತಿಯನ್ನು ನಾನು ನೋಡಲೇ ಇಲ್ಲ. ರಾಜ್ಯದಲ್ಲಿ ಕಲೆ, ಸಂಸ್ಕೃತಿ, ಸಾಹಿತ್ಯ ಉಳಿದಿದ್ದರೆ ಅದಕ್ಕೆ ಕರಾವಳಿ ಜಿಲ್ಲೆಗಳ ಕೊಡುಗೆ ಅಪಾರವಾಗಿದೆ. ಇಲ್ಲಿನ ಕಾರ್ಯವೈಖರಿಯೇ ವಿಶೇಷವಾಗಿದೆ. ರಾಜ್ಯದಲ್ಲೇ ಮೊದಲ ಖಾಸಗಿ ವೈದ್ಯಕೀಯ ಕಾಲೇಜುಗಳು ಮಂಗಳೂರಿನಲ್ಲಿ ಆರಂಭಿಸಲಾಗಿತ್ತು. ನಾಡಿನ ಅಭಿವೃದ್ಧಿಯಲ್ಲೂ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೊಡುಗೆ ಅಪಾರವಾಗಿದೆ ಎಂದರು.

ರಾಜ್ಯದಲ್ಲಿ ಸೈಬರ್ ಅಪರಾಧಗಳನ್ನು ದಾಖಲಿಸಲು ಪ್ರತಿ ಠಾಣೆಯಲ್ಲೂ ಅವಕಾಶ ಮಾಡಿಕೊಟ್ಟಿರುವುದರಿಂದಾಗಿ ಸಂಖ್ಯೆ ಹೆಚ್ಚಾಗಿದೆ ಎನಿಸುತ್ತಿದೆ. ಸೈಬರ್ ಅಪರಾಧಗಳ ನಿಗ್ರಹಕ್ಕೆ ಪ್ರತಿಯೊಬ್ಬ ಕಾನ್‍ಸ್ಟೇಬಲ್‍ಗೂ ತರಬೇತಿ ನೀಡಲಾಗುವುದು. ಇದಕ್ಕಾಗಿ ಜಿಲ್ಲಾ ಪೊಲೀಸ್ ಕಚೇರಿಗಳಲ್ಲಿ ತರಬೇತಿ ಘಟಕ ಆರಂಭಿಸುವುದಾಗಿ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

1 hour ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

6 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

10 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

10 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

10 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

13 hours ago