g parameshwar
ಮಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಕರಾವಳಿ ಹಾಗೂ ಮಲೆನಾಡಿನ ಮೂರು ಜಿಲ್ಲೆಗಳಿಗೆ ಸೀಮಿತವಾಗಿ ಕೋಮು ಹಿಂಸೆ ನಿಗ್ರಹ ವಿಶೇಷ ಕಾರ್ಯಪಡೆಯನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಲೋಕಾರ್ಪಣೆ ಮಾಡಿದರು.
ಶಾಂತಿಯ ಸಂಕೇತವಾದ ಪಾರಿವಾಳದ ಚಿಹ್ನೆಯನ್ನೊಳಗೊಂಡ ವಿಶೇಷ ಕಾರ್ಯಪಡೆ ಲಾಂಛನವನ್ನು ಹಾಗೂ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು.
ಇದೇ ವೇಳೆ ಮಾತನಾಡಿದ ಪರಮೇಶ್ವರ್ ಅವರು, ಆರು ತಿಂಗಳ ಹಿಂದೆ ಮಂಗಳೂರಿನಲ್ಲಿ ಒಂದು ಕೊಲೆಯಾಗಿತ್ತು. ಸ್ವಾಭಾವಿಕವಾಗಿ ಆತಂಕ, ಭಯದ ವಾತಾವರಣ ನಿರ್ಮಾಣವಾಗಿತ್ತು. ಆ ವೇಳೆ ಶಾಂತಿ ಸಹಬಾಳ್ವೆಯ ಪರಿಸ್ಥಿತಿಯನ್ನು ನಾನು ನೋಡಲೇ ಇಲ್ಲ. ರಾಜ್ಯದಲ್ಲಿ ಕಲೆ, ಸಂಸ್ಕೃತಿ, ಸಾಹಿತ್ಯ ಉಳಿದಿದ್ದರೆ ಅದಕ್ಕೆ ಕರಾವಳಿ ಜಿಲ್ಲೆಗಳ ಕೊಡುಗೆ ಅಪಾರವಾಗಿದೆ. ಇಲ್ಲಿನ ಕಾರ್ಯವೈಖರಿಯೇ ವಿಶೇಷವಾಗಿದೆ. ರಾಜ್ಯದಲ್ಲೇ ಮೊದಲ ಖಾಸಗಿ ವೈದ್ಯಕೀಯ ಕಾಲೇಜುಗಳು ಮಂಗಳೂರಿನಲ್ಲಿ ಆರಂಭಿಸಲಾಗಿತ್ತು. ನಾಡಿನ ಅಭಿವೃದ್ಧಿಯಲ್ಲೂ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೊಡುಗೆ ಅಪಾರವಾಗಿದೆ ಎಂದರು.
ರಾಜ್ಯದಲ್ಲಿ ಸೈಬರ್ ಅಪರಾಧಗಳನ್ನು ದಾಖಲಿಸಲು ಪ್ರತಿ ಠಾಣೆಯಲ್ಲೂ ಅವಕಾಶ ಮಾಡಿಕೊಟ್ಟಿರುವುದರಿಂದಾಗಿ ಸಂಖ್ಯೆ ಹೆಚ್ಚಾಗಿದೆ ಎನಿಸುತ್ತಿದೆ. ಸೈಬರ್ ಅಪರಾಧಗಳ ನಿಗ್ರಹಕ್ಕೆ ಪ್ರತಿಯೊಬ್ಬ ಕಾನ್ಸ್ಟೇಬಲ್ಗೂ ತರಬೇತಿ ನೀಡಲಾಗುವುದು. ಇದಕ್ಕಾಗಿ ಜಿಲ್ಲಾ ಪೊಲೀಸ್ ಕಚೇರಿಗಳಲ್ಲಿ ತರಬೇತಿ ಘಟಕ ಆರಂಭಿಸುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…