ಬೆಂಗಳೂರು : ಇಂದಿನಿಂದ ದೇಶಾದ್ಯಂತ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜಾರಿಯಾಗಲಿವೆ. ಭಾರತೀಯ ನ್ಯಾಯ ಸಂಹಿತಾ , ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯ್ದೆಗಳು ಜಾರಿಗೆ ಬರುತ್ತಿವೆ.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಇಂದಿನಿಂದ ದೇಶಾದ್ಯಂತ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜಾರಿಯಾಗಿದೆ.ಕಾನೂನು ಜಾರಿ ಬಗ್ಗೆ ನಾವು ಒಂದು ಆ್ಯಪ್ ಮಾಡಿದ್ದೇವೆ. ಇನ್ನು ಮುಂದೆ ದಾಖಲಾಗುವ ಕೇಸ್ ಗಳಿಗೆ ಇದು ಅನ್ವಯವಾಗಲಿದೆ. ಇದರ ಪರಿಣಾಮ ಏನು ಅಂತಾ ಈಗಲೇ ಹೇಳಲು ಆಗಲ್ಲ. ಸ್ವಲ್ಪ ದಿನಗಳ ನಂತರ ಇದರ ಸೆಕ್ಷನ್ ಬಗ್ಗೆ ಗೊತ್ತಾಗುತ್ತದೆ. ಹೊಸ ಕಾನೂನು ಬಗ್ಗೆ ಕಾನ್ಸ್ ಟೇಬಲ್ ನಿಂದ ಹಿಡಿದು ಎಲ್ಲರಿಗೂ ತರಬೇತಿ ನೀಡಿದ್ದೇವೆ. ಇದಕ್ಕಾಗಿ ಪೊಲೀಸರಿಗೆ ಆ್ಯಪ್ ಸಹ ಸಿದ್ಧಪಡಿಸಲಾಗಿದೆ.ಇಡೀ ದೇಶದಲ್ಲಿ ಮೂರು ಕಾನೂನು ಜಾರಿಯಾಗಿವೆ.ಫೀಡ್ ಬ್ಯಾಕ್ ನೋಡಿಕೊಂಡು ಪರಿಷ್ಕರಣೆ ಮಾಡುಬಹುದು ಎಂದು ಹೇಳಿದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…