ಕೋಲಾರ: ಹನಿಟ್ರ್ಯಾಪ್ ತನಿಖೆ ಸಿಎಂಗೆ ಬಿಟ್ಟಿದ್ದು. ಆದರೆ, ಹನಿಟ್ರ್ಯಾಪ್ ಆರೋಪ ಮುಂದೆಯೂ ಬರಬಹುದು ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ವಿಚಾರವಾಗಿ ವಿಧಾನಸಭೆಯಲ್ಲಿ ಎಷ್ಟು ಸಾಧ್ಯವೋ ಅಷ್ಟನ್ನು ಹೇಳಿದ್ದೇನೆ. ಅದನ್ನೂ ಹೊರತು ಪಡಿಸಿ ಹೇಳುವ ಆಗಿಲ್ಲ. ಇದರ ಬಗ್ಗೆ ತನಿಖೆ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಟ್ಟಿದ್ದು. ಈ ಆರೋಪ ಮೊದಲೂ ಅಲ್ಲ, ಕೊನೆಯೂ ಅಲ್ಲ ಮುಂದೆ ಬಂದರು ಬರಬಹುದು ಎಂದು ಹೇಳಿದರು.
ಇನ್ನು ಹನಿಟ್ರ್ಯಾಪ್ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆ ಚರ್ಚೆ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರತಿದಿನವೂ ಅವರ ಜೊತೆ ಮಾತನಾಡುವೆ ಎಂದು ತಿಳಿಸಿದರು.
ಇನ್ನು ಸ್ಪೀಕರ್ ಪೀಠಕ್ಕೆ ಅವಮಾನ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ನಾನಾಗಿದ್ದರೆ ಮುಂಚಿತವಾಗಿ ಈ ಕೆಲಸ ಮಾಡುತ್ತಿದ್ದೆ. ಬಜೆಟ್ಗೆ ಸಂಬಂಧಪಟ್ಟಂತೆ ವಿರೋಧ ಪಕ್ಷದ ಶಾಸಕರ ಪ್ರಶ್ನೆಗೆ ಸಿಎಂ ಉತ್ತರ ಕೊಡುವ ಸಂದರ್ಭದಲ್ಲಿ ಆಡಚಣೆ ಉಂಟುಮಾಡಿರುವುದು ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆ. ನಾನು ಸ್ಪೀಕರ್ ಆಗಿದ್ದರೆ ಮೊದಲೇ ಸಸ್ಪೆಂಡ್ ಮಾಡುತ್ತಿದ್ದೆ ಎಂದು ನುಡಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…