ಕೋಲಾರ: ಹನಿಟ್ರ್ಯಾಪ್ ತನಿಖೆ ಸಿಎಂಗೆ ಬಿಟ್ಟಿದ್ದು. ಆದರೆ, ಹನಿಟ್ರ್ಯಾಪ್ ಆರೋಪ ಮುಂದೆಯೂ ಬರಬಹುದು ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ವಿಚಾರವಾಗಿ ವಿಧಾನಸಭೆಯಲ್ಲಿ ಎಷ್ಟು ಸಾಧ್ಯವೋ ಅಷ್ಟನ್ನು ಹೇಳಿದ್ದೇನೆ. ಅದನ್ನೂ ಹೊರತು ಪಡಿಸಿ ಹೇಳುವ ಆಗಿಲ್ಲ. ಇದರ ಬಗ್ಗೆ ತನಿಖೆ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಟ್ಟಿದ್ದು. ಈ ಆರೋಪ ಮೊದಲೂ ಅಲ್ಲ, ಕೊನೆಯೂ ಅಲ್ಲ ಮುಂದೆ ಬಂದರು ಬರಬಹುದು ಎಂದು ಹೇಳಿದರು.
ಇನ್ನು ಹನಿಟ್ರ್ಯಾಪ್ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆ ಚರ್ಚೆ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರತಿದಿನವೂ ಅವರ ಜೊತೆ ಮಾತನಾಡುವೆ ಎಂದು ತಿಳಿಸಿದರು.
ಇನ್ನು ಸ್ಪೀಕರ್ ಪೀಠಕ್ಕೆ ಅವಮಾನ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ನಾನಾಗಿದ್ದರೆ ಮುಂಚಿತವಾಗಿ ಈ ಕೆಲಸ ಮಾಡುತ್ತಿದ್ದೆ. ಬಜೆಟ್ಗೆ ಸಂಬಂಧಪಟ್ಟಂತೆ ವಿರೋಧ ಪಕ್ಷದ ಶಾಸಕರ ಪ್ರಶ್ನೆಗೆ ಸಿಎಂ ಉತ್ತರ ಕೊಡುವ ಸಂದರ್ಭದಲ್ಲಿ ಆಡಚಣೆ ಉಂಟುಮಾಡಿರುವುದು ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆ. ನಾನು ಸ್ಪೀಕರ್ ಆಗಿದ್ದರೆ ಮೊದಲೇ ಸಸ್ಪೆಂಡ್ ಮಾಡುತ್ತಿದ್ದೆ ಎಂದು ನುಡಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…