ವಿಜಯಪುರ: ಹನಿಟ್ರ್ಯಾಪ್ ಬಹಳ ಹೀನ ಕೆಲಸ ಎಂದು ಸಚಿವ ಎಂ.ಬಿ.ಪಾಟೀಲ್ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಚರ್ಚೆಯಲ್ಲಿರುವ ಹನಿಟ್ರ್ಯಾಪ್ ಪ್ರಕರಣ ಕುರಿತು ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್ ಅವರು, ಹನಿಟ್ರ್ಯಾಪ್ ಎನ್ನುವಂತಹದ್ದು ಬಹಳ ಹೀನಾಯವಾದ ಕೆಲಸ ಎಂದು ಬೇಸರ ವ್ಯಕ್ತಪಡಿಸಿದರು.
ಸಚಿವ ರಾಜಣ್ಣ ಅವರಿಗೆ ಹನಿಟ್ರ್ಯಾಪ್ ವಿಚಾರದಲ್ಲಿ ಏನಾಗಿದೆ ಎಂಬುದು ಗೊತ್ತಿಲ್ಲ. ಅವರು ಸಿಎಂ ಹಾಗೂ ಗೃಹಮಂತ್ರಿಗಳಿಗೆ ಏನಾಗಿದೆ ಎನ್ನುವುದನ್ನು ಕೂಲಂಕುಷವಾಗಿ ಹೇಳಿದ್ದಾರೆ. ಹೀಗಾಗಿ ಇದನ್ನು ಯಾರು ಮಾಡಿದ್ದಾರೆ? ಯಾಕೆ ಮಾಡಿದ್ದಾರೆ? ಎಂದು ಸಂಪೂರ್ಣ ತನಿಖೆಯಾಗಬೇಕು. ತನಿಖೆ ಬಳಿಕವೇ ಸತ್ಯಾಸತ್ಯತೆ ಏನೆಂದು ತಿಳಿಯಲಿದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮಲ್ಲಿ ಸಿಎಂ ಹುದ್ದೆ ಖಾಲಿಯಿಲ್ಲ. ನಾನು ಎಲ್ಲೂ ಕೂಡ ಸಿಎಂ ಆಕಾಂಕ್ಷಿ ಎಂದು ಘೋಷಣೆ ಮಾಡಿಲ್ಲ. ಲಿಂಗಾಯತರಿಗೆ ಅಧಿಕಾರ ಸಿಕ್ಕಿಲ್ಲ ಎಂದಿದ್ದೇನೆ ಅಷ್ಟೇ ಎಂದು ಪರೋಕ್ಷವಾಗಿ ಲಿಂಗಾಯತರು ಸಿಎಂ ಆಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…