ವಿಜಯಪುರ: ಹನಿಟ್ರ್ಯಾಪ್ ಬಹಳ ಹೀನ ಕೆಲಸ ಎಂದು ಸಚಿವ ಎಂ.ಬಿ.ಪಾಟೀಲ್ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಚರ್ಚೆಯಲ್ಲಿರುವ ಹನಿಟ್ರ್ಯಾಪ್ ಪ್ರಕರಣ ಕುರಿತು ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್ ಅವರು, ಹನಿಟ್ರ್ಯಾಪ್ ಎನ್ನುವಂತಹದ್ದು ಬಹಳ ಹೀನಾಯವಾದ ಕೆಲಸ ಎಂದು ಬೇಸರ ವ್ಯಕ್ತಪಡಿಸಿದರು.
ಸಚಿವ ರಾಜಣ್ಣ ಅವರಿಗೆ ಹನಿಟ್ರ್ಯಾಪ್ ವಿಚಾರದಲ್ಲಿ ಏನಾಗಿದೆ ಎಂಬುದು ಗೊತ್ತಿಲ್ಲ. ಅವರು ಸಿಎಂ ಹಾಗೂ ಗೃಹಮಂತ್ರಿಗಳಿಗೆ ಏನಾಗಿದೆ ಎನ್ನುವುದನ್ನು ಕೂಲಂಕುಷವಾಗಿ ಹೇಳಿದ್ದಾರೆ. ಹೀಗಾಗಿ ಇದನ್ನು ಯಾರು ಮಾಡಿದ್ದಾರೆ? ಯಾಕೆ ಮಾಡಿದ್ದಾರೆ? ಎಂದು ಸಂಪೂರ್ಣ ತನಿಖೆಯಾಗಬೇಕು. ತನಿಖೆ ಬಳಿಕವೇ ಸತ್ಯಾಸತ್ಯತೆ ಏನೆಂದು ತಿಳಿಯಲಿದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮಲ್ಲಿ ಸಿಎಂ ಹುದ್ದೆ ಖಾಲಿಯಿಲ್ಲ. ನಾನು ಎಲ್ಲೂ ಕೂಡ ಸಿಎಂ ಆಕಾಂಕ್ಷಿ ಎಂದು ಘೋಷಣೆ ಮಾಡಿಲ್ಲ. ಲಿಂಗಾಯತರಿಗೆ ಅಧಿಕಾರ ಸಿಕ್ಕಿಲ್ಲ ಎಂದಿದ್ದೇನೆ ಅಷ್ಟೇ ಎಂದು ಪರೋಕ್ಷವಾಗಿ ಲಿಂಗಾಯತರು ಸಿಎಂ ಆಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…