ರಾಜ್ಯ

ಹನಿಟ್ರ್ಯಾಪ್‌ ಪ್ರಕರಣ: ಸಚಿವ ಕೆ.ಎನ್‌.ರಾಜಣ್ಣಗೆ ಬಿಗಿ ಭದ್ರತೆ

ಕೋಲಾರ: ಇಲ್ಲಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಚಿವ ಕೆ.ಎನ್‌.ರಾಜಣ್ಣ ಅವರು ಇಂದು ನಗರಕ್ಕೆ ಭೇಟಿ ನೀಡಿದ್ದು, ಅವರಿಗೆ ಹನಿಟ್ರ್ಯಾಪ್‌ ಪ್ರಕರಣದ ಹಿನ್ನೆಲೆಯಲ್ಲಿ ಕೋಲಾರ ನಗರ ಪೊಲೀಸ್‌ ಇಲಾಖೆಯೂ ಬಿಗಿ ಭದ್ರತೆಯನ್ನು ಆಯೋಜಿಸಿದೆ.

ಈ ವೇಳೆ ನಗರದಲ್ಲಿ ಇಂದು(ಮಾರ್ಚ್.‌22) ಹನಿಟ್ರ್ಯಾಪ್‌ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ರಾಜಣ್ಣ ಅವರು, ನಾನು ಈಗಾಗಲೇ ಏನೇನೂ ಹೇಳೇಬೇಕೋ ಅದೆನ್ನೆಲ್ಲಾನ್ನೂ ವಿಧಾನಸಭೆಯ ಸದನದಲ್ಲಿ ಹೇಳಿದ್ದೇನೆ. ಅದನ್ನು ಬಿಟ್ಟು ಬೇರೆ ಹೇಳುವಂತಹದ್ದು ಏನೂ ಇಲ್ಲ. ಇಂತಹ ಪ್ರಕರಣಗಳು ಇದೇ ಮೊದಲು ಅಲ್ಲ ಅಥವಾ ಕೊನೆಯೂ ಅಲ್ಲ. ನಿರಂತರವಾಗಿ ನಡೆಯುತ್ತಿರುತ್ತವೆ ಎಂದರು.

ಇದೇ ಸಂದರ್ಭದಲ್ಲಿ ವಿಪಕ್ಷದ 18 ಶಾಸಕರನ್ನು ಅಮಾನತುಗೊಳಿಸಿದರ ಬಗ್ಗೆ ಮಾತನಾಡಿದ ಅವರು, ವಿಧಾನಸೇ ಅಧಿವೇಶನದಲ್ಲಿ ಶುಕ್ರವಾರ ನಡೆದ ಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಪ್ಪು ಚುಕ್ಕೆ ತರುವತಂಹದ್ದು. ಜನಪರವಾದ ವಿಚಾರದಲ್ಲಿ ಗಲಾಟೆ ನಡೆದಿದ್ದರೆ ಒಪ್ಪುವಂತಹದಾಗಿದೆ. ಆದರೆ ವಿರೋಧ ಪಕ್ಷದವರು ಬಜೆಟ್‌ ಮೇಲಿನ ಉತ್ತರಕ್ಕೆ ಅಡ್ಡಿಪಡಿಸಿದ್ದಾರೆ. ಹೀಗಾಗಿ ಈ ಘಟನೆಯೊಂದು ಪೂರ್ವಯೋಜಿತ ಪಿತೂರಿ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

9 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

9 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

10 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

10 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

10 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

11 hours ago