ರಾಜ್ಯ

ಹನಿಟ್ರ್ಯಾಪ್‌ ಗದ್ದಲ: ಸಿಬಿಐ ತನಿಖೆಗೆ ಆಗ್ರಹಿಸಿದ ಸುರೇಶ್‌ಗೌಡ

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಚೀಟಿ ನೀಡಿದವರು ಯಾರು? ಅವರು ಚೀಟಿ ನೀಡಿದ ಬಳಿಕವೇ ಅವರು ಹನಿಟ್ರ್ಯಾಪ್‌ ಬಗ್ಗೆ ಚರ್ಚಿಸಿದರು. ಹಾಗಾಗಿ ಈ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಬಿಜೆಪಿ ಸುರೇಶ್‌ಗೌಡ ಆಗ್ರಹಿಸಿದ್ದಾರೆ.

ವಿಧಾನಸಭೆಯಲ್ಲಿ ಇಂದು(ಮಾರ್ಚ್‌.21) ಈ ಕುರಿತು ಮಾತನಾಡಿದ ಅವರು, ಶಾಸಕ ಯತ್ನಾಳ್‌ ಅವರು ಮಾತನಾಡುತ್ತಿದ್ದಾಗ ಆಡಳಿತ ಪಕ್ಷದಿಂದ ಅವರಿಗೆ ಒಂದು ಚೀಟಿ ಬಂತು. ಚೀಟಿ ಬಂದ ಮೇಲೆ ಯತ್ನಾಳ್ ಹನಿಟ್ರ್ಯಾಪ್ ವಿಚಾರದ ಬಗ್ಗೆ ಮಾತಾಡಿದರು. ಅವರಿಗೆ ಆ ಚೀಟಿ ನೀಡಿದವರು ಯಾರು? ಅಥವಾ ಅವರಿಗೆ ಚೀಟಿ ನೀಡಿದವರು ಸಿಎಂಗೆ ಆಪ್ತರಾ? ಇದರ ಕುರಿತು ಸಿಬಿಐ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ಪ್ರಕರಣದ ಹಿನ್ನೆಲೆ ಏನು?

ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಮಾರ್ಷಲ್‌ ಒಬ್ಬರು ಚೀಟಿ ನೀಡಿದರು. ಆ ನಂತರವೇ ಸದನದಲ್ಲಿ ನೇರವಾಗಿ ಹಾಸನದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌.ರಾಜಣ್ಣ ಮೇಲೆ ಹನಿಟ್ರ್ಯಾಪ್‌ ಪ್ರಯತ್ನ ನಡೆದಿದೆ ಎಂದು ಪ್ರಸ್ತಾಪಿಸಿದ್ದರು. ಈ ಪ್ರಸ್ತಾಪದ ಬೆನ್ನಲ್ಲೇ ತಮ್ಮ ಮೇಲೆ ಹನಿಟ್ರ್ಯಾಪ್‌ ಪ್ರಯತ್ನ ನಡೆದಿರುವುದು ಸತ್ಯ ಎಂಬುದನ್ನು ರಾಜಣ್ಣ ಒಪ್ಪಿಕೊಂಡಿದ್ದರು.

ಅರ್ಚನ ಎಸ್‌ ಎಸ್

Recent Posts

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

1 hour ago

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

4 hours ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

4 hours ago

ಊರೊಳಗೆ ಬೆರೆತು ಜನರ ಬಣ್ಣವೇ ಆದ ಕೆ.ಟಿ.ಶಿವಪ್ರಸಾದ್

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…

4 hours ago

ಅಮೆರಿಕ ಎಂಬ ಪ್ರಯೋಗಕ್ಕೆ ಇನ್ನೂರೈವತ್ತು ವಸಂತಗಳು

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…

5 hours ago

ಓದುಗರ ಪತ್ರ: ಎಸ್‌ಐಆರ್: ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…

8 hours ago