ರಾಜ್ಯ

ಸಚಿವರಿಗೆ ಹನಿಟ್ರ್ಯಾಪ್‌ | ಉನ್ನತ ಮಟ್ಟದ ತನಿಖೆಯಾಗಲಿದೆ ; ಸಚಿವೆ ಕೃಷ್ಣೆಬೈರೇಗೌಡ

ಬೆಂಗಳೂರು: ಸಚಿವರನ್ನು ಹನಿಟ್ರ್ಯಾಪ್‌ಗೆ ಸಿಲುಕಿಸಲು ಯತ್ನಿಸಿದ ಆರೋಪಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ವಿಧಾನ ಪರಿಷತ್ತಿಗೆ ತಿಳಿಸಿದರು.

ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವಿಷಯ ಪ್ರಸ್ತಾಪಿಸಿದಾಗ ಮಧ್ಯೆ ಪ್ರವೇಶಿಸಿದ ಸಚಿವರು, ಈ ವಿಚಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಉನ್ನತಮಟ್ಟದ ತನಿಖೆ ನಡೆಸುವುದಾಗಿ ಈಗಾಗಲೇ ಹೇಳಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದರು.

ಹನಿಟ್ರ್ಯಾಪ್ ವಿಚಾರವನ್ನು ಬದಿಗಿಡುವ,ಇಲ್ಲವೆ ಮುಚ್ಚಿಡುವ ಉದ್ದೇಶ ಸರ್ಕಾರಕ್ಕೆ ಇಲ್ಲ. ಈ ವಿಚಾರದಲ್ಲಿ ಸತ್ಯಾಂಶವಿದ್ದರೆ ಬೆಳಕಿಗೆ ಬರಲಿ ಎಂಬ ಉದ್ದೇಶದಿಂತ ತನಿಖೆ ನಡೆಸಲಾಗುತ್ತದೆ. ಈ ವಿಚಾರದಲ್ಲಿ ವಿರೋಧ ಪಕ್ಷಗಳಿಗೆ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು.

ಇದಕ್ಕೂ ಮುನ್ನ ಸಭಾನಾಯಕ ಎನ್.ಎಸ್.ಭೋಸರಾಜು ಮಾತನಾಡಿ, ಬಿಜೆಪಿ ಸೇರಿದಂತೆ ಎಲ್ಲಾ ಕಡೆ ಆರೋಪವಿದೆ. ಈ ವಿಚಾರವನ್ನು ಸರ್ಕಾರ ಗಂಭಿರವಾಗಿ ಪರಿಗಣಿಸಿದೆ ಎಂದರು.

ವಿಷಯ ಪ್ರಸ್ತಾಪಿಸಿದ ಛಲವಾದಿ ನಾರಾಯಣಸ್ವಾಮಿ ಅವರು ಕೆಲವು ದಿನಗಳಿಂದ ಸರ್ಕಾರದಲ್ಲಿ ಗೊಂದಲದ ವಾತಾವರಣವಿದೆ. ಸಚಿವ ಸತೀಶ್ ಜಾರಕಿಹೊಳಿ ಅವರು ಸಚಿವ ರಾಜಣ್ಣ ಸೇರಿದಂತೆ ೪೮ ಜನರ ಮೇಲೆ ಹನಿಟ್ರ್ಯಾಪ್ ಆಗಿದೆ ಎಂಬ ಆರೋಪ ಮಾಡಿದ್ದಾರೆ. ಹನಿಟ್ರ್ಯಾಪ್ ಆರೋಪದ ಬಗ್ಗೆ ಹಾಲಿ ನ್ಯಾಯಾಧೀಶರಿಂದ ಅಥವಾ ಸಿಬಿಐನಿಂದ ತನಿಖೆ ಮಾಡಿಸಬೇಕು ಎಂದು ಆಗ್ರಹಿಸಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

59 mins ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

1 hour ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

1 hour ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

1 hour ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

1 hour ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

1 hour ago