ರಾಜ್ಯ

ಹನಿಟ್ರ್ಯಾಪ್‌ ಪ್ರಕರಣ : ಕೊನೆಗೂ ದೂರು ನೀಡಿದ ಕೆ.ಎನ್ ರಾಜಣ್ಣ

ಬೆಂಗಳೂರು :  ಹನಿಟ್ರ್ಯಾಪ್‌‌ಗೆ ಯತ್ನಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು‌ ಅಂತಿಮವಾಗಿ ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ದೂರು ನೀಡಿದ್ದಾರೆ.

ಸದಾಶಿವನಗರದ ಗೃಹಕಚೇರಿಯಲ್ಲಿ ಮಂಗಳವಾರ ಸಂಜೆ ಭೇಟಿ ಮಾಡಿ ದೂರು ನೀಡಿದರು. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು, ಹನಿಟ್ರ್ಯಾಪ್‌ಗೆ ಯತ್ನ ಆಗಿದೆ ಎಂಬ ವಿಷಯ ಸದನದಲ್ಲಿ ಚರ್ಚೆಗೆ ಬಂದಾಗ, ನನ್ನ ಮೇಲೆ‌ ಪ್ರಯತ್ನ ಆಗಿದೆ ಎಂದು ಸಚಿವ ಕೆ.ಎನ್.ರಾಜಣ್ಣ ಅವರು ಹೇಳಿದ್ದರು. ಗೃಹ ಸಚಿವರಿಗೆ ಮನವಿ ಕೊಡುತ್ತೇನೆ, ಕ್ರಮ ತೆಗೆದುಕೊಳ್ಳಬೇಕು ಎಂದಿದ್ದರು. ಈ ದಿನ ಮನವಿ ನೀಡಿದ್ದಾರೆ. ಮನವಿ ಸ್ವೀಕರಿಸಿದ್ದು, ಮುಂದೆ ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಸಿಎಂ ಅವರೊಂದಿಗೆ ಚರ್ಚಿಸುತ್ತೇನೆ. ಯಾವ ಹಂತದಲ್ಲಿ, ಯಾರಿಂದ ತನಿಖೆಯಾಗಬೇಕು ಎಂಬುದನ್ನು ಸಿಎಂ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ‌ ಜಿ.ಪರಮೇಶ್ವರ ಅವರು ತಿಳಿಸಿದರು.

ಸದನದಲ್ಲಿ ಚರ್ಚೆಯಾಗಿರುವ ಹಿನ್ನೆಲೆಯಲ್ಲಿ ಮನವಿ ನೀಡಿದ್ದಾರೆ. ಇದರ ಆಧಾರದ ಮೇಲೆ ಮುಂದೆ ಏನು ಮಾಡಬೇಕು ಎಂಬುದನ್ನು ಕಾನೂನು ತಜ್ಞರ ಜೊತೆ ಚರ್ಚಿಸುತ್ತೇನೆ. ಸಚಿವ ರಾಜಣ್ಣ ಅವರು ನೀಡಿರುವ ಮನವಿಯಲ್ಲಿರುವ ಅಂಶಗಳನ್ನು ಬಹಿರಂಗಪಡಿಸುವುದಿಲ್ಲ ಎಂದರು.

ಪೂರ್ವನಿಯೋಜಿತ ಕಾರ್ಯಕ್ರಮಗಳಿದ್ದ ಹಿನ್ನೆಲೆಯಲ್ಲಿ ಮನವಿ ನೀಡಲು ಆಗಿಲ್ಲ ಎಂದು ರಾಜಣ್ಣ ಅವರೇ ಹೇಳಿದ್ದರು. ಈಗ ಮನವಿ ಸಲ್ಲಿಸಿದ್ದಾರೆ. ನಮಗೆ ಎನೆಲ್ಲ ವಿಷಯ ಗೊತ್ತಿದ್ದೆಯೋ ಅದೆಲ್ಲವನ್ನು ಕಾನೂನು ತಜ್ಞರು ಮತ್ತು ಸಿಎಂ ಅವರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ಸದನದಲ್ಲಿ ಚರ್ಚೆಯಾಗಿರುವ ಹನಿಟ್ರ್ಯಾಪ್ ಯತ್ನ ವಿಷಯಕ್ಕೆ ಸಂಬಂಧಿಸಿದಂರೆ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಪಿಐಎಲ್‌ನ ತೀರ್ಪಿಗಾಗಿ ಕಾಯುವುದಿಲ್ಲ. ಅದನ್ನು ಪ್ರತ್ಯೇಕವಾಗಿ ಪರಿಗಣಿಸುತ್ತೇವೆ ಎಂದರು.

ಹನಿಟ್ರ್ಯಾಪ್ ಯತ್ನ ವಿಷಯ ಸದನದಲ್ಲಿ ಚರ್ಚೆಯಾಗಿರುವುದರಿಂದ ಸುಮೋಟೋ (ಸ್ವಯಂ ಪ್ರೇರಿತ ದೂರು) ದಾಖಲಿಸಲು ಬರುವುದಿಲ್ಲ. ಸ್ಪೀಕರ್ ಅವರು ಸುಮೋಟೋ ದಾಖಲಿಸುವಂತೆ ಸೂಚಿಸಬಹುದಿತ್ತು. ಅವರು ಹೇಳಿದ್ದರೆ ಬೇರೆ ವಿಷಯವಾಗುತ್ತಿತ್ತು. ಆ ರೀತಿ ಆಗಿಲ್ಲ. ವಿಷಯ ಸದನದಲ್ಲಿ ಪ್ರಸ್ತಾಪವಾಗುವ ಮೊದಲು ಸಚಿವ ರಾಜಣ್ಣ ಅವರಾಗಲಿ ಮತ್ತು ಅವರ ಪುತ್ರ ಆರ್.ರಾಜೇಂದ್ರ ಅವರಾಗಲಿ ನನ್ನ ಬಳಿ ಚರ್ಚಿಸಿಲ್ಲ ಎಂದು ಸ್ಪಷ್ಟನೆ‌ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

4 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

4 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

4 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

4 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

4 hours ago