ರಾಜ್ಯ

ಹೊನ್ನಾವರ| ಲಾರಿ ಪಲ್ಟಿ: ಮೂವರಿಗೆ ಗಾಯ, ಇಬ್ಬರ ದುರ್ಮರಣ

ಉತ್ತರ ಕನ್ನಡ: ಹೊನ್ನಾವರ ತಾಲ್ಲೂಕಿನ ಸುಳೆಮುರ್ಖಿ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ-69ರಲ್ಲಿ ಇಂದು ಬೆಳಗಿನ ಜಾವ ಕಬ್ಬಿಣದ ಸಾಮಗ್ರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಮೂವರಿಗೆ ಗಂಭೀರ ಗಾಯ ಹಾಗೂ ಇಬ್ಬರು ಮೃತಪಟ್ಟಿದ್ದಾರೆ.

ಈ ದುರ್ಘಟನೆಯೂ ಸಾಗರದಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿಗೆ ಹೊರಟಿದ್ದಾಗ ಸುಳೆಮುರ್ಖಿ ಬಳಿ ಇಂದು(ಜನವರಿ.6) ಬೆಳಗಿನ ಜಾವ ಸಂಭವಿಸಿದ್ದು, ಲಾರಿಯಲ್ಲಿ ಒಟ್ಟು ಆರು ಜನರು ಪ್ರಯಾಣಿಸುತ್ತಿದ್ದರು. ಅದರಲ್ಲಿ ಮೂವರಿಗೆ ಗಂಭೀರ ಗಾಯ ಹಾಗೂ ಇಬ್ಬರು ಮೃತರು ಬಿಹಾರ ರಾಜ್ಯದ ಮೂಲದವರು ಎಂದು ಮೂಲಗಳಿಂದ ತಿಳಿದು ಬಂದಿದೆ.

ಅಪಘಾತ ಸಂಭವಿಸಿದ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು, ಮೂವರು  ಗಾಯಾಳುಗಳನ್ನುಹೊನ್ನಾವರ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಸ್ಥಳವನ್ನು ಪರಿಶೀಲಿಸಿದ್ದಾರೆ. ಈ ಪ್ರಕರಣ ಹೊನ್ನಾವರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಅರ್ಚನ ಎಸ್‌ ಎಸ್

Recent Posts

ನಟಿ ಶುಭಾ ಪೂಂಜಾ ವೈವಾಹಿಕ ಜೀವನದಲ್ಲಿ ಬಿರುಗಾಳಿ ; ವಿಚ್ಛೇದನಕ್ಕೆ ಮೊರೆ ಹೋದ ದಂಪತಿ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟಿ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಶುಭಾ ಪೂಂಜಾ ಅವರ ವೈವಾಹಿಕ…

3 mins ago

ಮುಖ್ಯಮಂತ್ರಿ ಆದ ಮೊದಲ ದಿನವೇ ಸಚಿವರಿಗೆ ಡಿಕೆಶಿ ಎಚ್ಚರಿಕೆ

ಬೆಂಗಳೂರು : ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಮತ್ತು ಪಕ್ಷದ…

1 hour ago

ಇರಾನ್‌ ಯುದ್ಧಕ್ಕೆ ಬ್ರೇಕ್‌ : ಯುಎಸ್‌ ಹೌಸ್‌ ನಿರ್ಣಯ ಅಂಗೀಕಾರ, ಟ್ರಂಪ್‌ಗೆ ಭಾರಿ ಹಿನ್ನಡೆ

ವಾಷಿಂಗ್ಟನ್‌ : ಇರಾನ್‌ ವಿರುದ್ಧದ ಯುದ್ಧವನ್ನು ಡೊನಾಲ್ಡ್‌ ಟ್ರಂಪ್‌ ಮುಂದುವರಿಸದಂತೆ ತಡೆಯಲು ರಿಪಬ್ಲಿಕನ್‌ ನೇತೃತ್ವದ ಅಮೆರಿಕದ ಹೌಸ್‌ ಆಫ್‌ ರೆಪ್ರೆಸೆಂಟೀಟಿವ್ಸ್‌…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ ; ಜೂನ್‌ 4 ಗುರುವಾರ

5 hours ago

ವಿಧಾನಪರಿಷತ್‌ ಚುನಾವಣೆ: ಹರಿಪ್ರಸಾದ್‌ ಸೇರಿ ನಾಲ್ವರಿಗೆ ಕಾಂಗ್ರೆಸ್‌ ಟಿಕೆಟ್‌

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್‌ ನಾಲ್ಕು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಒಟ್ಟು ಏಳು ಸ್ಥಾನಗಳು ಖಾಲಿ ಇದ್ದು, 4…

17 hours ago

ನೂತನ ಸಿಎಂ ಡಿ.ಕೆ.ಶಿವಕುಮಾರ್‌ಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ ಡಿ.ಕೆ.ಶಿವಕುಮಾರ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ…

18 hours ago