ರಾಜ್ಯ

ಬೆಂಗಳೂರಲ್ಲಿ ಭೀಕರ ಘಟನೆ ; ತನ್ನ ಪ್ರೇಮಿಯನ್ನು ಬೆಂಕಿ ಹಚ್ಚಿ ಕೊಂದ ಪ್ರಿಯತಮೆ

ಬೆಂಗಳೂರು : ಫಾರಿನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಅಂತ ಹೇಳಿ ಪ್ರಿಯಕರನ ಕೈಕಾಲು ಕಟ್ಟಿದ ಪ್ರಿಯತಮೆ ಆತನನ್ನು ಬೆಂಕಿ ಇಟ್ಟು ಹತ್ಯೆ ಮಾಡಿರುವ ಭೀಕರ ಘಟನೆ ಬೆಂಗಳೂರಿ ಬ್ಯಾಡರಹಳ್ಳಿ ನಡೆದಿದೆ. ಈ ಧಾರುಣ ಘಟನೆ ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ.

‘ವೆಸ್ಟರ್ನ್ ಸ್ಟೈಲ್’ನಲ್ಲಿ ನಿನಗೆ ಪ್ರಪೋಸ್ ಮಾಡ್ತೀನಿ ಎಂದು ನಂಬಿಸಿ, ಪ್ರಿಯಕರನ ಕೈ-ಕಾಲು ಕಟ್ಟಿ, ಕಣ್ಣಿಗೆ ಬಟ್ಟೆ ಸುತ್ತಿ ಪೆಟ್ರೋಲ್ ಸುರಿದು ಹತ್ಯೆ ಮಾಡಲಾಗಿದೆ. ಪ್ರಸ್ತುತ ಯುವತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇಷ್ಟಕ್ಕೂ ಆಗಿದ್ದೇನು?
ಪೊಲೀಸ್ ಮೂಲಗಳ ಪ್ರಕಾರ ಮೃತ ಕಿರಣ್ ಮತ್ತು ಆರೋಪಿ ಯುವತಿ ಪ್ರೇರಣಾ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ಪರಿಚಯವಾಗಿ ಸ್ನೇಹ, ಬಳಿಕೆ ಸ್ನೇಹ ಪ್ರೀತಿಗೆ ತಿರುಗಿದೆ. ಮಂಗಳವಾರ ಪ್ರೇರಣಾ ತನ್ನ ಪ್ರಿಯಕರ ಕಿರಣ್ ನನ್ನು ಮನೆಗೆ ಕರೆದಿದ್ದಳು. ಅಂದು ಆಕೆಯ ತಾಯಿ ಮತ್ತು ಅಣ್ಣ ಮನೆಯಲ್ಲಿ ಇಲ್ಲದಿದ್ದನ್ನು ನೋಡಿ ಕಿರಣ್ ಮನೆಗೆ ಬಂದಿದ್ದನು.

ಇದೇ ಸಂದರ್ಭದಲ್ಲಿ ಯುವತಿ ಪ್ರೇರಣಾ ‘ನಿನಗೆ ವಿದೇಶಿ ಶೈಲಿಯಲ್ಲಿ ಪ್ರಪೋಸ್ ಮಾಡ್ತೀನಿ’ ಎಂದು ಹೇಳಿ ಕಿರಣ್‌ನ ಕಣ್ಣಿಗೆ ಬಟ್ಟೆ ಕಟ್ಟಿ, ಕೈ-ಕಾಲುಗಳನ್ನು ಹಗ್ಗದಿಂದ ಬಿಗಿದಿದ್ದಾಳೆ. ಕಿರಣ್ ‘ಯಾಕೆ ಇಷ್ಟು ಟೈಟ್ ಆಗಿ ಕಟ್ತಿದ್ದೀಯಾ?’ ಎಂದು ಕೇಳಿದಾಗ, ‘ಇದು ಫಾರಿನ್ ಸ್ಟೈಲ್, ಸುಮ್ಮನಿರು’ ಎಂದು ನಂಬಿಸಿದ್ದಾಳೆ.

ಕಿರಣ್ ಕೈಕಾಲು ಬಿಡಿಸಿಕೊಳ್ಳಲಾಗದೇ ಸಂಪೂರ್ಣ ಅಸಹಾಯಕನಾದ ಮೇಲೆ ಆಕೆ ಆತನ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಬೆಂಕಿಯ ಜ್ವಾಲೆಯಿಂದ ತಪ್ಪಿಸಿಕೊಳ್ಳಲಾಗದೆ ಕಿರಣ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಭೀಕರ ಕೃತ್ಯ ನಡೆಯುವ ದೃಶ್ಯವನ್ನು ಯುವತಿ ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾಳೆ ಎನ್ನಲಾಗಿದೆ. ಪೊಲೀಸರ ಪ್ರಕಾರ ಯುವತಿ ಪ್ರೇರಣಾ ತನ್ನ ಪ್ರಿಯಕರ ತನ್ನನ್ನು ಬೇಕೆಂದೇ ದೂರವಿಡುತ್ತಿದ್ದಾನೆ ಎಂದು ಅನುಮಾನಗೊಂಡಿದ್ದಳು. ತನಗೆ ಸಮಯ ನೀಡುತ್ತಿಲ್ಲ. ತನ್ನೊಂದಿಗೆ ಸರಿಯಾಗಿ ಮಾತನಾಡುತ್ತಿಲ್ಲ. ತನ್ನ ಪ್ರೀತಿಯನ್ನು ನಿರ್ಲಕ್ಷಿಸುತ್ತಿದ್ದಾನೆ ಎಂದು ಕೋಪಗೊಂಡಿದ್ದಳು. ಇದೇ ಕಾರಣಕ್ಕೆ ಈ ಕೃತ್ಯ ವೆಸಗಿರಬಹುದು ಎಂದು ಶಂಕಿಸಲಾಗಿದೆ.

 

ಆಂದೋಲನ ಡೆಸ್ಕ್

Recent Posts

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

11 mins ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

1 hour ago

ಮುರುಘಾ ಮಠದ ಆಸ್ತಿ ಕೇಸ್:‌ ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್‌

ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ…

1 hour ago

ತಮಿಳುನಾಡು ವಿಧಾನಸಭೆ ಚುನಾವಣೆ: ನಾಳೆ ಮತದಾನಕ್ಕೆ ಸಕಲ ಸಿದ್ಧತೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.…

2 hours ago

ಕೊಡಗಿನ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಇಬ್ಬರನ್ನು ಬಂಧಿಸಲಾಗಿದೆ: ಶಾಸಕ ಪೊನ್ನಣ್ಣ ಮಾಹಿತಿ

ಬೆಂಗಳೂರು: ಕೊಡಗಿನ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರ ಬಂಧನ ಆಗಿದೆ ಎಂದು…

3 hours ago

ಹರ ಹರ ಮಹಾದೇವ ಘೋಷಣೆಯೊಂದಿಗೆ ಚಾರ್‌ ಧಾಮ್‌ ಯಾತ್ರೆ ಆರಂಭ

ಉತ್ತರಾಖಂಡ್:‌ ಇಲ್ಲಿನ ಪವಿತ್ರ ಚಾರ್‌ ಧಾಮ್‌ ಯಾತ್ರೆ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಭಕ್ತರ ದರ್ಶನಕ್ಕಾಗಿ ಕೇದಾರನಾಥ ದೇವಾಲಯದ ದ್ವಾರಗಳನ್ನು ಇಂದು…

3 hours ago