ರಾಜ್ಯ

ಬೆಂಗಳೂರಲ್ಲಿ ಭೀಕರ ಘಟನೆ ; ತನ್ನ ಪ್ರೇಮಿಯನ್ನು ಬೆಂಕಿ ಹಚ್ಚಿ ಕೊಂದ ಪ್ರಿಯತಮೆ

ಬೆಂಗಳೂರು : ಫಾರಿನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಅಂತ ಹೇಳಿ ಪ್ರಿಯಕರನ ಕೈಕಾಲು ಕಟ್ಟಿದ ಪ್ರಿಯತಮೆ ಆತನನ್ನು ಬೆಂಕಿ ಇಟ್ಟು ಹತ್ಯೆ ಮಾಡಿರುವ ಭೀಕರ ಘಟನೆ ಬೆಂಗಳೂರಿ ಬ್ಯಾಡರಹಳ್ಳಿ ನಡೆದಿದೆ. ಈ ಧಾರುಣ ಘಟನೆ ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ.

‘ವೆಸ್ಟರ್ನ್ ಸ್ಟೈಲ್’ನಲ್ಲಿ ನಿನಗೆ ಪ್ರಪೋಸ್ ಮಾಡ್ತೀನಿ ಎಂದು ನಂಬಿಸಿ, ಪ್ರಿಯಕರನ ಕೈ-ಕಾಲು ಕಟ್ಟಿ, ಕಣ್ಣಿಗೆ ಬಟ್ಟೆ ಸುತ್ತಿ ಪೆಟ್ರೋಲ್ ಸುರಿದು ಹತ್ಯೆ ಮಾಡಲಾಗಿದೆ. ಪ್ರಸ್ತುತ ಯುವತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇಷ್ಟಕ್ಕೂ ಆಗಿದ್ದೇನು?
ಪೊಲೀಸ್ ಮೂಲಗಳ ಪ್ರಕಾರ ಮೃತ ಕಿರಣ್ ಮತ್ತು ಆರೋಪಿ ಯುವತಿ ಪ್ರೇರಣಾ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ಪರಿಚಯವಾಗಿ ಸ್ನೇಹ, ಬಳಿಕೆ ಸ್ನೇಹ ಪ್ರೀತಿಗೆ ತಿರುಗಿದೆ. ಮಂಗಳವಾರ ಪ್ರೇರಣಾ ತನ್ನ ಪ್ರಿಯಕರ ಕಿರಣ್ ನನ್ನು ಮನೆಗೆ ಕರೆದಿದ್ದಳು. ಅಂದು ಆಕೆಯ ತಾಯಿ ಮತ್ತು ಅಣ್ಣ ಮನೆಯಲ್ಲಿ ಇಲ್ಲದಿದ್ದನ್ನು ನೋಡಿ ಕಿರಣ್ ಮನೆಗೆ ಬಂದಿದ್ದನು.

ಇದೇ ಸಂದರ್ಭದಲ್ಲಿ ಯುವತಿ ಪ್ರೇರಣಾ ‘ನಿನಗೆ ವಿದೇಶಿ ಶೈಲಿಯಲ್ಲಿ ಪ್ರಪೋಸ್ ಮಾಡ್ತೀನಿ’ ಎಂದು ಹೇಳಿ ಕಿರಣ್‌ನ ಕಣ್ಣಿಗೆ ಬಟ್ಟೆ ಕಟ್ಟಿ, ಕೈ-ಕಾಲುಗಳನ್ನು ಹಗ್ಗದಿಂದ ಬಿಗಿದಿದ್ದಾಳೆ. ಕಿರಣ್ ‘ಯಾಕೆ ಇಷ್ಟು ಟೈಟ್ ಆಗಿ ಕಟ್ತಿದ್ದೀಯಾ?’ ಎಂದು ಕೇಳಿದಾಗ, ‘ಇದು ಫಾರಿನ್ ಸ್ಟೈಲ್, ಸುಮ್ಮನಿರು’ ಎಂದು ನಂಬಿಸಿದ್ದಾಳೆ.

ಕಿರಣ್ ಕೈಕಾಲು ಬಿಡಿಸಿಕೊಳ್ಳಲಾಗದೇ ಸಂಪೂರ್ಣ ಅಸಹಾಯಕನಾದ ಮೇಲೆ ಆಕೆ ಆತನ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಬೆಂಕಿಯ ಜ್ವಾಲೆಯಿಂದ ತಪ್ಪಿಸಿಕೊಳ್ಳಲಾಗದೆ ಕಿರಣ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಭೀಕರ ಕೃತ್ಯ ನಡೆಯುವ ದೃಶ್ಯವನ್ನು ಯುವತಿ ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾಳೆ ಎನ್ನಲಾಗಿದೆ. ಪೊಲೀಸರ ಪ್ರಕಾರ ಯುವತಿ ಪ್ರೇರಣಾ ತನ್ನ ಪ್ರಿಯಕರ ತನ್ನನ್ನು ಬೇಕೆಂದೇ ದೂರವಿಡುತ್ತಿದ್ದಾನೆ ಎಂದು ಅನುಮಾನಗೊಂಡಿದ್ದಳು. ತನಗೆ ಸಮಯ ನೀಡುತ್ತಿಲ್ಲ. ತನ್ನೊಂದಿಗೆ ಸರಿಯಾಗಿ ಮಾತನಾಡುತ್ತಿಲ್ಲ. ತನ್ನ ಪ್ರೀತಿಯನ್ನು ನಿರ್ಲಕ್ಷಿಸುತ್ತಿದ್ದಾನೆ ಎಂದು ಕೋಪಗೊಂಡಿದ್ದಳು. ಇದೇ ಕಾರಣಕ್ಕೆ ಈ ಕೃತ್ಯ ವೆಸಗಿರಬಹುದು ಎಂದು ಶಂಕಿಸಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

14 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

23 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

23 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

23 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

23 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

23 hours ago