ರಾಜ್ಯ

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ.

ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು 20ಕ್ಕೂ ಹೆಚ್ಚು ವಾಹನಗಳ ಮೇಲೆ ಹಾರಿಸಿದೆ. ಚಾಲಕನ ಬೇಜವಾಬ್ದಾರಿಯಿಂದ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನು ಓದಿ: ಮ.ಬೆಟ್ಟ | ಅಪರಿಚಿತ ವಾಹನ ಡಿಕ್ಕಿ : ಜಿಂಕೆ ಸಾವು

ಆನೇಕಲ್ ಪಟ್ಟಣ ಸಮೀಪದ ಬೆಸ್ತಮಾನಹಳ್ಳಿಯಿಂದ ಚಂದಾಪುರದವರೆಗೆ ಸರಿಸುಮಾರು 14 ಕಿಲೋಮೀಟರ್‌ಗಳವರೆಗೆ ಕಂಟೈನರ್ ಚಾಲಕ ಬೇಜವಾಬ್ದಾರಿಯುತವಾಗಿ ಚಾಲನೆ ಮಾಡುತ್ತಾ, ರಸ್ತೆಯಲ್ಲಿ ಸಂಚರಿಸುತ್ತಿದ್ದ ಹಾಗೂ ರಸ್ತೆ ಬದಿ ನಿಲ್ಲಿಸಿದ್ದ ಸುಮಾರು 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಐದಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅದೃಷ್ಟವಶಾತ್, ಕಂಟೈನರ್ ಡಿಕ್ಕಿ ಹೊಡೆದ ಹೆಚ್ಚಿನ ವಾಹನಗಳು ರಸ್ತೆ ಬದಿ ಪಾರ್ಕ್ ಮಾಡಿದ್ದ ವಾಹನಗಳಾಗಿದ್ದವು. ಆ ಸಮಯದಲ್ಲಿ ವಾಹನಗಳಲ್ಲಿ ಯಾರೂ ಇಲ್ಲದ ಕಾರಣ ಹೆಚ್ಚಿನ ಪ್ರಾಣಾಪಾಯ ತಪ್ಪಿದಂತಾಗಿದೆ.

ಆಂದೋಲನ ಡೆಸ್ಕ್

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

10 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

11 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

11 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

11 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

13 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

13 hours ago