accident (1)
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯಾ ಬಳಿ ಶನಿವಾರ ನಡೆದಿದೆ.
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕ್ಯಾಂಟರ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಕರ್ತವ್ಯದಲ್ಲಿದ್ದ ಕೆಎಸ್ಸಾರ್ಟಿಸಿ ಟಿಕೆಟ್ ತಪಾಸಣೆ ಇನ್ ಸ್ಪೆಕ್ಟರ್ ಶಕುನಿಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಲೂರು ತಾಲೂಕಿನ ಪಾಳ್ಯ ಸಮೀಪ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದೆ.
ಇದನ್ನೂ ಓದಿ:-ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ
ನಲ್ಲೂರು-ಮಗ್ಗೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಬಸ್ ಅನ್ನು ತಡೆದು, ಪ್ರಯಾಣಿಕರ ಟಿಕೆಟ್ ಪರಿಶೀಲನೆ ನಡೆಸುವ ಉದ್ದೇಶದಿಂದ ಶಕುನಿ ಗೌಡ ರಸ್ತೆ ದಾಟುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಏಕಾಏಕಿ ವೇಗವಾಗಿ ಬಂದ ಲಾರಿ ಅವರಿಗೆ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ. ಢಿಕ್ಕಿ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಶಕುನಿಗೌಡ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಚಾಲಕನ ಪತ್ತೆಗೆ ತನಿಖೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.
• ಶೇಷಾದ್ರಿ ಗಂಜೂರು ಅಮೆರಿಕದ ಫ್ಲಾರಿಡಾ ರಾಜ್ಯದ ಸಣ್ಣ ಊರೊಂದರ ಹೈಸ್ಕೂಲಿನಲ್ಲಿ, 21 ವರ್ಷಗಳ ಹಿಂದೆ, ಇಬ್ಬರು ಬಾಲಕಿಯರು ಹೊಡೆದಾಡಲು…
ಬೆಂಗಳೂರು : ಕರ್ನಾಟಕ ರಸ್ತೆ ಸಾರಿಗೆ ನಿಗಮವು ವಾರಾಂತ್ಯದ ದಿನಗಳಲ್ಲಿ ಬೆಂಗಳೂರಿನಿಂದ ವಿವಿಧ ಪ್ರವಾಸಿ, ಯಾತ್ರಾ ಸ್ಥಳಗಳಿಗೆ ಪ್ಯಾಕೇಜ್ ಟೂರ್…
ಕೊಲಂಬೋ : ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಭಾನುವಾರ (ಫೆ.15) ಸಂಜೆ ನಡೆಯುವ ರಣರೋಚಕ ಪಂದ್ಯಕ್ಕೆ ಜಗತ್ತಿನಾದ್ಯಂತ ಕ್ರಿಕೆಟ್…
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…