ಬೆಂಗಳೂರು: ಖ್ಯಾತ ಪರಿಸರವಾದಿ, ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಸಿರಾಟದ ತೊಂದರೆ ಹಾಗೂ ಸೋಂಕಿನ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ಹೇಳಿದ್ದಾರೆ.
ಸಾಲು ಮರದ ತಿಮ್ಮಕ್ಕ ಅವರು ಗ್ಯಾಸ್ಟ್ರೋ ಇಂಟಸ್ಟೈನರ್ ಸೋಂಕು, ಅತಿಸಾರ ಮತ್ತು ನಿರ್ಜಲೀಕರಣದಿಂದ ಬಳಲುತ್ತಿದ್ದರು.
ಕೆಲವು ದಿನಗಳಿಂದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರ ಸ್ಥಿತಿ ಸ್ಥಿರವಾಗಿದ್ದು, ಇಂದು ಅಥವಾ ನಾಳೆ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ತಿಮ್ಮಕ್ಕ ಅವರ ಪುತ್ರ ಉಮೇಶ್ ಮಾಹಿತಿ ನೀಡಿದ್ದು, ತಾಯಿಗೆ 113 ವರ್ಷ, ಆಕೆಯ ಆರೋಗ್ಯ ಸ್ಥಿತಿ ಹದಗೆಟ್ಟ ಕಾರಣ ಆಸ್ಪತ್ರೆಗೆ ದಾಖಲು ಮಾಡಿದ್ದೆವು. ಈಗ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ.
ಇನ್ನು ನೂರಾರು ಮರಗಳ ಪಾಲನೆ ಪೋಷಣೆ ಮಾಡುವ ಮೂಲಕ ವೃಕ್ಷಮಾತೆಯೆಂದೇ ಹೆಸರಾಗಿರುವ ಸಾಲು ಮರದ ತಿಮ್ಮಕ್ಕ ಅವರು ಈವರೆಗೆ ಲಕ್ಷಾಂತರ ಸಸಿ ನೆಟ್ಟು ಪೋಷಣೆ ಮಾಡಿದ್ದಾರೆ.
• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…
ಮಹಾದೇಶ್ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…
ಅಧಿಕಾರಿಗಳ ಮನವೊಲಿಕೆಗೆ ಸಮ್ಮತಿಸುತ್ತಿರುವ ಭೂ ಮಾಲೀಕರು ಕೆ.ಬಿ.ರಮೇಶನಾಯಕ ಮೈಸೂರು : ದಶಕಗಳಿಂದಲೂ ಬಡ-ಮಧ್ಯಮ ವರ್ಗದ ಜನರಿಗೆ ನಿವೇಶನ ಹಂಚಿಕೆ ಮಾಡಲು,…
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…